ಪುತ್ತೂರು: ಕ್ವಾರಂಟೈನ್ ಉಲ್ಲಂಘಿಸಿದ ಕಾರಣದಿಂದಾಗಿ ಕರಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ನಿವಾಸಿ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಪ್ರಕರಣ ದಾಖಲಿಸಿದ್ದಾರೆ.
ದುಬೈನಿಂದ ಬೆಂಗಳೂರು ಮೂಲಕ ಮಾ.21 ರಂದು ಊರಿಗೆ ಆಗಮಿಸಿದ್ದು ಆ ಬಳಿಕ 14 ದಿನಗಳು ಮನೆಯಲ್ಲೇ ಇರುವಂತೆ ಸೂಚನೆ ನೀಡಲಾಗಿತ್ತು. ಆದರೂ ಆತ ಅದನ್ನು ಉಲ್ಲಂಘನೆ ಮಾಡಿದ್ದಾನೆ. ಆ ಬಳಿಕ ಆತನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಕ್ವಾರೆಂಟೈನ್ ಉಲ್ಲಂಘನೆ ಮಾಡಿದ ಆತನ ಮೇಲೆ ಹಾಗೆಯೇ ಆತನ ಮನೆಯವರ ಮೇಲೆಯೂ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel