#ಕೊರೊನಾ ಲಾಕ್ಡೌನ್ | ಸುಳ್ಯ ತಾಲೂಕು ಸಂಪೂರ್ಣ ಬಂದ್ | ಅನಗತ್ಯ ಪೇಟೆಗೆ ಬಂದವರಿಗೆ ಬಿಸಿ ಬಿಸಿ ಲಾಠಿ ರುಚಿ |

March 28, 2020
12:04 PM

ಸುಳ್ಯ:ಕೊರೊನಾ ವೈರಸ್ ದ ಕ ಜಿಲ್ಲೆ ಹಾಗೂ ಕಾಸರಗೋಡು ಪ್ರದೇಶದಲ್ಲಿ  ಹರಡಿರುವ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಶನಿವಾರ ಸಂಪೂರ್ಣ ಬಂದ್ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಎಲ್ಲಾ ಅಂಗಡಿಗಳು ಬಂದ್ ಆಗಿವೆ.  ಪ್ರತೀ ಬಾರಿ ಹೇಳಿಯೂ ಅನಗತ್ಯವಾಗಿ ಪೇಟೆಗೆ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಸುಳ್ಯ ಪೇಟೆ ಸಂಪೂರ್ಣ ಬಂದ್ ಆಗಿದ್ದು  ಹಾಲಿನ ಅಂಗಡಿಗಳು ಬೆಳಗ್ಗೆ ತೆರೆದಿತ್ತು. ಕೆಲವು ಮೆಡಿಕಲ್ ತೆರೆದಿದೆ. ಆಸ್ಪತ್ರೆ ಚಿಕಿತ್ಸೆಗೆ ಲಭ್ಯವಿದೆ.

ಉಳಿದಂತೆ ಸಂಪಾಜೆ, ಬೆಳ್ಳಾರೆ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಸೇರಿದಂತೆ ಗ್ರಾಮೀಣ ಭಾಗಗಳು ಬಂದ್ ಆಗಿವೆ. ಬಳ್ಪದಲ್ಲಿ ಬೆಳಗ್ಗೆ ಗುಂಪು ಸೇರಿದವರನ್ನು ಪೊಲೀಸರು ಚದುರಿಸಿದ್ದಾರೆ. ಗುತ್ತಿಗಾರಿನಲ್ಲಿ ಅನಗತ್ಯ ತಿರುಗಾಡಿದವರಿಗೆ ಪೊಲೀಸರು ಲಾಠಿ ಬೀಸಿದ್ದಾರೆ. ಬೆಳ್ಳಾರೆ, ಪಂಜದಲ್ಲೂ ಇದೇ ವಾತಾವರಣ ಕಂಡುಬಂದಿದೆ.

ಪಂಜ ಹಾಲು ಸಂಗ್ರಹಣಾ ಕೇಂದ್ರದಲ್ಲಿ ವಿವಿಧ ಸಹಕಾರಿ ಸಂಘದಿಂದ ಆಗಮಿಸುವ ಹಾಲು ಸೇರಿ ಸುಮಾರು 2500 ಲೀಟರ್ ಹಾಲು ಪ್ರತಿದಿನ ಸಂಗ್ರಹವಾಗುತ್ತದೆ.  ಆದರೆ ಇದಕ್ಕೆ ಇಂದು ಅವಕಾಶ ಇರಲಿಲ್ಲ. ಕೆಲವು ಹೈನುಗಾರರು ಪ್ರತೀ ದಿನ 40-50 ಲೀಟರ್ ಹಾಲು ಸಂಘಕ್ಕೆ ಹಾಕುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror