ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ 1 ಪಾಸಿಟಿವ್ | ಕಾಸರಗೋಡಿನಲ್ಲಿ 2 ಪಾಸಿಟಿವ್ | ಸುಳ್ಯದಲ್ಲಿ ಮುಂಜಾಗ್ರತಾ ಕ್ರಮ |

March 31, 2020
8:37 PM

ಮಂಗಳೂರು/ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಂಗಳವಾರ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.  ಈ ಮೂಲಕ ರಾಜ್ಯದಲ್ಲಿ ಒಟ್ಟು101 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.  ಇದೇ ಸಂದರ್ಭ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಂದು 2 ಪಾಸಿಟಿವ್ ಪ್ರಕರಣಗಳು  ದೃಢಪಟ್ಟಿವೆ. ಉಡುಪಿಯಲ್ಲಿ  ಯಾವುದೇ ಪ್ರಕರಣ ಕಂಡುಬಂದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸುಳ್ಯ ಮೂಲಕ ವ್ಯಕ್ತಿಯಾಗಿರುವ 34 ವರ್ಷದ ಯುವಕ ದುಬೈನಿಂದ ಆಗಮಿಸಿದ್ದ.  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ಈ ಯುವಕ ಮಾ. 18 ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋ ಕ್ವಾರಂಟೆನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾ.28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ಮಾ.31 ರ ಮಂಗಳವಾರ ಲಭ್ಯವಾಗಿದ್ದು ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈ ಯುವಕ ಸದ್ಯ ಆರೋಗ್ಯವಾಗಿದ್ದ ಯಾವುದೇ ಆತಂಕವಿಲ್ಲ. ಚಿಕಿತ್ಸೆ ಮುಂದುವರಿದೆ.

ಮಂಗಳವಾರದಂದು ಒಟ್ಟು 41 ಮಂದಿ ಸ್ಕ್ರೀನಿಂಗ್ ಗೆ ಒಳಪಟ್ಟಿದ್ದು ಇದುವರೆಗೆ  5875 ಮಂದಿ ನಿಗಾದಲ್ಲಿದ್ದಾರೆ.

ಕಾಸರಗೋಡಿನಲ್ಲಿ  2  ಕೊರೊನಾ ವೈರಸ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ.

ಸುಳ್ಯದಲ್ಲಿ  ಮುಂಜಾಗ್ರತಾ ಕ್ರಮ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ದುಬೈಯಿಂದ ಆಗಮಿಸಿದ ಯುವಕನಿಗೆ ಕೊರೊನಾ ವೈರಸ್ ಪಾಸಿಟವ್ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ  ಈ ಯುವಕನ ನೇರ ಸಂಪರ್ಕದಲ್ಲಿ ಇದ್ದವರನ್ನು  ಹಾಗೂ ಆತನ ಸಂಪರ್ಕದಲ್ಲಿದ್ದವರನ್ನು ಹೋಕ್ವಾರಂಟೇನ್ ಗೆ ಸಿದ್ಧತೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿ್ದ್ಧತೆಗೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror