ಕೊರೊನಾ ವೈರಸ್ ನಿಯಂತ್ರಣಕ್ಕೆ ಕ್ರಮ | ಮಾ.31 ರವರೆಗೆ ದ ಕ ಜಿಲ್ಲೆಯಲ್ಲಿ ಅಗತ್ಯ ಸೇವೆ ಮಾತ್ರಾ ಲಭ್ಯ | ಸಾರ್ವಜನಿಕರು ಲಘುವಾಗಿ ಪರಿಗಣಿಸಬೇಡಿ

March 23, 2020
7:23 PM
ಮಂಗಳೂರು:ಕೊರೊನಾ ವೈರಸ್ ಹರಡುವ ಭೀತಿ ಇರುವುದರಿಂದ   ದ ಕ ಜಿಲ್ಲೆಯಾದ್ಯಂತ ಮಾ.31 ರವರೆಗೆ ಅಗತ್ಯ ಸೇವೆಗಳು ಮಾತ್ರವೇ ಲಭ್ಯವಿರುತ್ತದೆ. ಇತರ ಸೇವೆಗಳು ಬಹುತೇಕ ಬಂದ್ ಆಗಿರುತ್ತವೆ. ಇದನ್ನು ಸಾರ್ವಜನಿಕರು ಲಘುವಾಗಿ ಪರಿಗಣಿಸಬೇಡಿ ಎಂದು ದ ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ತಿಳಿಸಿದ್ದಾರೆ.
ಸೋಮವಾರದಿಂದ ದ ಕ ಜಿಲ್ಲೆಯಲ್ಲಿ  ಲಾಕ್ ಡೌನ್ ಎಂದರೂ ಅಂಗಡಿಗಳು ತೆರದಿದ್ದು ಜನಸಂಚಾರವೂ ಸಹಜ ಸ್ಥಿತಿಯಲ್ಲಿದ್ದ ಬಗ್ಗೆ ದೂರುಗಳು ಬಂದಿವೆ. ಸರಕಾರದ ಸೂಚನೆಯನ್ನು ಪ್ರತಿಯೊಬ್ಬರೂ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅವರು ಹೇಳಿದ್ದಾರೆ. ಸಾಮೂಹಿಕವಾಗಿ ಈ ರೋಗ ಹರಡಲು ಆರಂಭವಾದರೆ,  ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಿ, ಅಂಗಡಿ ಮುಂಗಟ್ಟು ಬಂದ್ ಮಾಡಿ ಇಲ್ಲದಿದ್ದರೆ ಕಠಿಣ ಕ್ರಮಕೈಗೊಳ್ಳುವುದು ಅನಿವಾರ್ಯವಾದೀತು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group