ಕೊರೋನಾ ಬಂದರೆ ಭಯಪಡಬೇಡಿ | ಕೊರೋನಾಕ್ಕೆ ಆಯುರ್ವೇದ ಚಿಕಿತ್ಸೆ ಪಡೆದ ಸಚಿವ ಸಿ ಟಿ ರವಿ ಸಲಹೆ ಏನು ?

July 24, 2020
10:00 PM

ಕೊರೋನಾ ಸೋಂಕಿಗೆ ಒಳಗಾದವರು ಯಾವುದೇ ಕಾರಣಕ್ಕೂ ಆತಂಕಕ್ಕೆ , ಭಯಕ್ಕೆ ಒಳಗಾಗಬೇಡಿ, ಮಾನಸಿಕ ಧೈರ್ಯ ತಂದುಕೊಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಚಿವ ಸಿ ಟಿ ರವಿ  ಚಿಕ್ಕಮಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ.

Advertisement
Advertisement

ಕೊರೋನಾ ಪಾಸಿಟಿವ್‌ ಬಂದ ಬಳಿಕ 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಪಡೆದ ಸಿ ಟಿ ರವಿ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೀಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 15 ದಿನಗಳ ಕಾಲ ಆಯುರ್ವೇದ ಚಿಕಿತ್ಸೆ ಮಾಡಿರುವ ಸಿ ಟಿ ರವಿ ಅವರು ಡಾ.ಗಿರಿಧರ್ ಕಜೆ ಅವರು ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸ್ವೀಕರಿಸುವುದರ ಜೊತೆಗೆ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ ಸೇವಿಸಿದ್ದರು. ಹೀಗಾಗಿ ಯಾರೇ ಕೊರೋನಾ ಸೋಂಕು ತಗುಲಿದರೂ ಅಥವಾ ತಗುಲದೇ ಇದ್ದರೂ ಅಮೃತಬಳ್ಳಿ ಹಾಗೂ ನೆಲ್ಲಿ ಕಷಾಯ, ಜೊತೆಗೆ ದಿನಕ್ಕೆ ನಾಲ್ಕೈದು ಲೀಟರ್ ನಷ್ಟು ಬಿಸಿ ನೀರು ಕುಡಿಯುವುದು  ಉತ್ತಮ ಎಂದು ಸಲಹೆ ನೀಡಿದ್ದಾರೆ. ಕೊರೋನಾ ಬಂದರೆ ಯಾರು ಹೆದರಬೇಡಿ ಎಂದು ಜನರಿಗೆ  ಮನವಿ ಮಾಡಿದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror