ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಿಕ್ಷಕರ ಕೊರತೆ : ಪ್ರತಿಭಟನೆಗೆ ನಿರ್ಧಾರ

July 22, 2019
4:00 PM

ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಚಿಂತನೆ ನಡೆದಿದೆ.

ಗ್ರಾಮೀಣ ಭಾಗದ ವಿದ್ಯಾದೇಗುವಲವಾದ ಈ ಸರಕಾರಿ ಶಾಲೆಯಲ್ಲಿ ಕಳೆದ ವರ್ಷ 71 ವಿದ್ಯಾರ್ಥಿಗಳು ಇದ್ದರು. ಈ ಬಾರಿ 61 ಕ್ಕೆ ಇಳಿದಿದೆ. ಕಾರಣ ಶಿಕ್ಷಕರ ಕೊರತೆ. ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರು, ಒಬ್ಬರು ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಇದ್ದಾರೆ. ಆದರೆ ಈ ಶಾಲೆಗೆ ನೇಮಕವಾದ ಒಬ್ಬರು ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಯಾಗಿದೆ. ಹೀಗಾಗಿ   ಸಮಸ್ಯೆ ಕಾರಣವಾಗಿದೆ. ಪ್ರಭಾರ ಮುಖ್ಯೋಪಾಧ್ಯಾಯರು ಇರುವುದು  ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಹೀಗಾಗಿ ಈಗ ಶಿಕ್ಷಕರ ನೇಮಕವಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗ್ರಾಮಸ್ಥರ ಬೇಡಿಕೆ ಹೀಗಿದೆ:

ವರ್ಗಾವಣೆಯಾದ ಶಿಕ್ಷಕರು ಮತ್ತೆ ಇದೇ ಶಾಲೆಗೆ ಬರಬೇಕು, ಮುಖ್ಯೋಪಾಧ್ಯಾಯರ ನೇಮಕವಾಗಬೇಕು, ಹೆಚ್ಚುವರಿ ಇಬ್ಬರು ಅತಿಥಿ ಶಿಕ್ಷಕರ ನೇಮಕವಾಗಬೇಕು, ಕನಿಷ್ಠ 2 ಶಾಲಾ ಕೊಠಡಿ  ನಿರ್ಮಾಣವಾಗಬೇಕು  ಎಂದು  ಒತ್ತಾಯಿಸಿದ್ದಾರೆ. 15 ದಿನಗಳೊಳಗೆ ವ್ಯವಸ್ಥೆ ಆಗದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು. ಅದೂ ಕೈಗೆ ಕಪ್ಪುಪಟ್ಟಿ ಧರಿಸಿ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror