ಕೊಳವೆ ಬಾವಿಯಲ್ಲಿ ಕಲುಷಿತ ಜಲ ಪತ್ತೆ : ನೀರನ್ನು ಬಳಸದಂತೆ ಕೂಡಿಗೆ ಶಾಲೆಗೆ ಸೂಚನೆ

September 6, 2019
2:00 PM

ಮಡಿಕೇರಿ : ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೂರು ವರ್ಷಗಳ ಹಿಂದೆ ಕೊರೆಸಲಾಗಿರುವ ಕೊಳವೆ ಬಾವಿಯಲ್ಲಿನ ನೀರು ಕಲುಷಿತಗೊಂಡಿದ್ದು, ಈ ನೀರನ್ನು ಕುಡಿಯಲು ಉಪಯೋಗಿಸಬಾರದೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ ಮುಖ್ಯಸ್ಥರಿಗೆ ಹಾಗೂ ಗ್ರಾ.ಪಂ ಗೆ ತಿಳಿಸಿದ್ದಾರೆ.

Advertisement
Advertisement

ಆರೋಗ್ಯ ಇಲಾಖೆಯವರು ಪ್ರತಿವರ್ಷದಂತೆ ಆ ವ್ಯಾಪ್ತಿಯ ಕೊಳವೆ ಬಾವಿಗಳ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವೇ ಅಥವಾ ಯೋಗ್ಯವಾಗಲ್ಲವೆ ಎಂಬುದನ್ನು ತಿಳಿಸುತ್ತಾರೆ. ಅದರಂತೆ ಕಳೆದ ತಿಂಗಳಲ್ಲಿ ಕೂಡಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕೊಳವೆ ಬಾವಿಯ ನೀರನ್ನು ಪರೀಕ್ಷಿಸಲಾಗಿ, ನೀರು ಕುಡಿಯಲು ಯೋಗ್ಯವಾಗಿಲ್ಲ ಕಲುಷಿತಗೊಂಡಿದ್ದು, ಶಾಲೆಯಲ್ಲಿ ಕುಡಿಯಲು ಹಾಗೂ ಆಹಾರ ತಯಾರಿಸಲು ಬಳಸಬಾರದೆಂದು ಸೂಚಿಸಿದ್ದರು.

ಆದರೂ, ಈ ಕೊಳವೆ ಬಾವಿಯ ನೀರನ್ನು ಬಳಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆರೋಗ್ಯ ಇಲಾಖೆಯವರು ಮತ್ತೊಮ್ಮೆ ಪ್ರಯೋಗಾಲಯದಲ್ಲಿ ನೀರನ್ನು ಪರೀಕ್ಷಿಸಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ನೀರಾಗಿರುವುದನ್ನು ಮತ್ತೊಮ್ಮೆ ದೃಢೀಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿ, ವಿದ್ಯಾರ್ಥಿಗಳಿಗೆ ಕುಡಿಯಲು ಹಾಗೂ ಆಹಾಯ ತಯಾರಿಸಲು ಈ ನೀರನ್ನು ಬಳಸದಂತೆ ಸೂಚಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಕಲುಷಿತ ನೀರು ದೊರೆಯುತ್ತಿರುವ ಬಗ್ಗೆ ಗ್ರಾ.ಪಂ ಈಗಾಗಲೇ ಜಿ.ಪಂ ಗಮನ ಸೆಳೆದಿದೆ ಎಂದು ಗ್ರಾ.ಪಂ ಅಧಿಕಾರಿಗಳು ತಿಳಿಸಿದರು. ಸ್ಥಳೀಯ ಎರಡು ಬಡಾವಣೆಗಳಿಗೂ ಇದೇ ಕೊಳವೆ ಬಾವಿಯ ನೀರು ಸರಬರಾಜಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೂ ನೀರನ್ನು ಬಳಸದಂತೆ ತಿಳಿಸಲಾಗಿದೆ ಎಂದರು. ಶುದ್ಧ ಕುಡಿಯುವ ನೀರು ದೊರೆಯುವಲ್ಲಿಯವರೆಗೆ ಈ ಕೊಳವೆ ಬಾವಿಯ ನೀರನ್ನು ಶಾಲೆಯ ಚಟುವಟಿಕೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲವೆಂದು ಶಾಲಾ ಮುಖ್ಯ ಶಿಕ್ಷಕರು ಸ್ಪಷ್ಟ ಪಡಿಸಿದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group