ಕ್ಯಾಂಪ್ಕೊ ಸದಸ್ಯರಿಗೆ ವೈದ್ಯಕೀಯ ವೆಚ್ಚ ಭರಿಸಲು 1ಲಕ್ಷ ರೂ. ನೆರವು

July 5, 2019
9:30 AM

ಮಂಗಳೂರು: ‘ಕ್ಯಾಂಪ್ಕೊ ಚಿತ್ತ ಸದಸ್ಯರ ಆರೋಗ್ಯದತ್ತ’  ಧ್ಯೇಯವಾಕ್ಯದಂತೆ ಸಂಸ್ಥೆ ತನ್ನ ಸದಸ್ಯರ ಆರೋಗ್ಯದತ್ತ ಕಾಳಜಿ ವಹಿಸುತ್ತಿದೆ. ಸದ್ಯ ಈ ಯೋಜನೆಯಡಿಯಲ್ಲಿ ವಿಶೇಷವಾಗಿ ಡಯಾಲಿಸಿಸ್, ತೆರೆದ ಹೃದಯ ಶಸ್ತ್ರಚಿಕಿತ್ಸೆ, ಕಿಡ್ನಿಟ್ರಾನ್ಸ್ ಪ್ಲಾಂಟೇಶನ್ ಮತ್ತು ಸಕ್ರಿಯ ಸದಸ್ಯರ ಹಾಗೂ ಅವರ ಕಾರ್ಯನಿರತ ಕಾರ್ಮಿಕರ ಅಪಘಾತ ಮರಣದಲ್ಲಿ ಆರ್ಥಿಕ ಪರಿಹಾರ ಒಳಗೊಂಡಿರುತ್ತದೆ. ನಿಯಮಾನುಸಾರ ಡಯಾಲಿಸಿಸ್ ಗೆ ರೂ.10,000, ಹೃದಯಚಿಕಿತ್ಸೆಗೆ ರೂ.50,000, ಕಿಡ್ನಿ ಅಳವಡಿಸಲು ರೂ.1 ಲಕ್ಷ ಹಾಗೂ ಆಕಸ್ಮಿಕವಾಗಿ ಮರಣ ಸಂಭವಿಸಿದಲ್ಲಿ ಆರ್ಥಿಕ ಪರಿಹಾರವಾಗಿ ರೂ.50,000ನೀಡಲಾಗುತ್ತದೆ.

Advertisement
Advertisement

ಬದಿಯಡ್ಕ ಶಾಖಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಕ್ಯಾಂಪ್ಕೊ ಸದಸ್ಯ ಎ.ಅಬ್ದುಲ್‍ಖಾದರ್‍ ಅವರು ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ಇತ್ತೀಚೆಗೆ ಕಿಡ್ನಿ ಅಳವಡಿಸಿಕೊಳ್ಳುವ ಶಸ್ತ್ರಚಿಕಿತ್ಸೆಯನ್ನು ಹೊಂದಿದ್ದರು. ಕ್ಯಾಂಪ್ಕೊ, ಸದಸ್ಯರ ಈ ವೈದ್ಯಕೀಯ ವೆಚ್ಚಕ್ಕಾಗಿ ರೂ.1 ಲಕ್ಷವನ್ನು ನೀಡಿದೆ.  ಕ್ಯಾಂಪ್ಕೊ ಬದಿಯಡ್ಕ ಶಾಖೆಯಲ್ಲಿ ಸಂಸ್ಥೆಯ ಅಧ್ಯಕ್ಷ  ಎಸ್.ಆರ್.ಸತೀಶ್ಚಂದ್ರ ಫಲಾನುಭವಿಯ ಸಹೋದರ  ನಿಜಾಮುದ್ದೀನ್‍ ಅವರಿಗೆ ಧನಸಹಾಯದ ರೂ.1 ಲಕ್ಷದ ಚೆಕ್ಕನ್ನು ನೀಡಿ  ಶೀಘ್ರ ಗುಣಮುಖರಾಗಿ ಆರೋಗ್ಯವಂತರಾಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ  ಶಂಕರನಾರಾಯಣ ಭಟ್‍ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ  ಸುರೇಶ್ ಭಂಡಾರಿ, ಕ್ಯಾಂಪ್ಕೊ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ
June 3, 2025
9:55 PM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group