ಕ್ಯಾನ್ಸರ್ ಇಲ್ಲದ ಮಹಿಳೆಗೆ ಕಿಮೋಥೆರಪಿ…! ಕೇರಳದಲ್ಲಿ ಆಘಾತಕಾರಿ ಚಿಕಿತ್ಸೆ…!

June 4, 2019
8:31 PM

ಕೊಟ್ಟಾಯಂ:  ಇದೊಂದು ಆಘಾತಕಾರಿ ಚಿಕಿತ್ಸೆ.  ಮಹಿಳೆಯೊಬ್ಬರಿಗೆ ಕ್ಯಾನ್ಸರ್ ಇದೆ ಎಂದು ಚಿಕಿತ್ಸೆ ನೀಡಿದ ಬಳಿಕ ಯಾವುದೇ ಕ್ಯಾನ್ಸರ್ ಅಂಶ ಇಲ್ಲದೇ ಇರುವುದು  ಬೆಳಕಿಗೆ ಬಂದಿದೆ. ಅದಾಗಲೇ ಕಿಮೋಥೆರಪಿ ಚಿಕಿತ್ಸೆ ನಡೆದಿತ್ತು. ಇದೀಗ ಮಹಿಳೆ ಸಂಕಷ್ಟ ಎದುರಿಸುತ್ತಿದ್ದಾರೆ.

ಕೊಟ್ಟಾಯಂನ 38 ವರ್ಷದ ರಜನಿ ಎಂಬ ಮಹಿಳೆಯ ಸ್ತನದಲ್ಲಿ ಗಂಟು ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ  ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ಕ್ಯಾನ್ಸರ್ ಇದೆ ಎಂಬ ವರದಿ ಬಂದಿದೆ. ಈ ವರದಿ ಆಧಾರದ ಮೇಲೆ  ಸರಕಾರಿ ಆಸ್ಪತ್ರೆ ವೈದ್ಯರು ಕೀಮೊಥೆರಪಿ ಮಾಡಿದ್ದರಂತೆ. ಮಹಿಳೆಗೆ ಕ್ಯಾನ್ಸರ್​ ಇಲ್ಲದಿದ್ದರೂ ವೈದ್ಯರು ಕಿಮೋಥೆರಪಿ ನೀಡಿದ್ದು ಈಗ ಬೆಳಕಿಗೆ ಬಂದಿದೆ. ಚಿಕಿತ್ಸೆಗೆಂದು ಮಹಿಳೆ ಕೊಟ್ಟಾಯಂನ ಸರಕಾರಿ ಮೆಡಿಕಲ್​ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು ಅಲ್ಲಿ ಖಾಸಗಿ ಲ್ಯಾಬ್ ವರದಿ ಆಧರಿಸಿ ಕಿಮೋಥೆರಪಿ ಚಿಕಿತ್ಸೆಯನ್ನೂ ನೀಡಿದ್ದಾರೆ. ಎರಡು ವಾರಗಳ ಕಾಲ ಚಿಕಿತ್ಸೆ ನಡೆದಿದೆ. ನಂತರ ಸರಕಾರಿ ಆಸ್ಪತ್ರೆ ಲ್ಯಾಬ್ ನಲ್ಲಿ ಮಹಿಳೆಗೆ ಕ್ಯಾನ್ಸರ್ ಇಲ್ಲವೆಂದು ವರದಿ ನೀಡಲಾಗಿದೆ. ಹೀಗಾಗಿ ಮಹಿಳೆ ಮತ್ತೆರಡು ಕಡೆ ಪರೀಕ್ಷೆ ನಡೆಸಿದ್ದಾಳೆ. ಅಲ್ಲಿಯೂ ಕ್ಯಾನ್ಸರ್ ಇಲ್ಲವೆಂಬ ವರದಿ ಬಂದಿದೆ. ಈ ಬಗ್ಗೆ ಮಹಿಳೆ ದೂರು ನೀಡಿದ್ದಾಳೆ. ಕೀಮೊಥೆರಪಿ ನಂತರ ಮಹಿಳೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಕುರಿತು ಕೇರಳ ಆರೋಗ್ಯ ಸಚಿವರು ತನಿಖೆಗೆ ಆದೇಶಿಸಿದ್ದಾರೆ.

ಇತ್ತೀಚೆಗೆ ಕ್ಯಾನ್ಸರ್ ಬಗ್ಗೆ ವಿಪರೀತ ಚರ್ಚೆ ನಡೆಯುತ್ತಿದೆ. ಅದರ ಚಿಕಿತ್ಸೆ ಬಗ್ಗೆ ಎರಡು ಪಟ್ಟು ಹೆಚ್ಚು ಚರ್ಚೆ ನಡೆಯುತ್ತಿದೆ. ವಿಪರೀತ ಖರ್ಚಾಗುವ ಕ್ಯಾನ್ಸರ್ ಚಿಕಿತ್ಸೆಗೆ ಸರಕಾರದಿಂದ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಿದ್ದರೂ ರೋಗಿಗಳು ತಕ್ಷಣದ ಚಿಕಿತ್ಸೆಗೆ ಒಳಪಡುವಂತೆ ಮಾಡುವ ಕೆಲವು ದಂಧೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಇವೆ. ಹೀಗಾಗಿ ಸರಿಯಾದ ಚಿಕಿತ್ಸೆ ಹಾಗೂ ಪರೀಕ್ಷೆಗಳು ಅಗತ್ಯವಾಗಿದೆ ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror