ಗಾಂಜಾವನ್ನು ಮಾರಾಟ ಯತ್ನ | ಒಬ್ಬ ವಶಕ್ಕೆ ಇನ್ನೊಬ್ಬ ಪರಾರಿ |

September 23, 2020
3:14 PM
ಪುತ್ತೂರು ತಾಲೂಕು ಕೆಮ್ಮಿಂಜೆ  ಗ್ರಾಮದ ನೈತಾಡಿ -ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ  ಇಬ್ಬರು  ವ್ಯಕ್ತಿಗಳು  ಕಪ್ಪು  ಬಣ್ಣದ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು ಸಾಝಿಲ್ ಅಹಮ್ಮದ್ (24)  ಎಂಬವನನ್ನು  ವಶಕ್ಕೆ ಪಡೆದಿದ್ದು ಮತ್ತೊಬ್ಬ ಪರಾರಿಯಾಗಿದ್ದಾನೆ.
ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯಾದರೆ, ಪರಾರಿಯಾದ ವ್ಯಕ್ತಿ ಪುತ್ತೂರು ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಅಶ್ರಫ್ ಎಂದು ತಿಳಿದುಬಂದಿರುತ್ತದೆ. ಬಂಧಿತ ಆರೋಪಿಯನ್ನು ಮತ್ತು ಆತನ ಬಳಿಯಿದ್ದ ದ್ವಿಚಕ್ರ ವಾಹನನ್ನು ತಪಾಸಣೆ ನಡೆಸಲಾಗಿ ಆತನಿಂದ ಅಂದಾಜು ಸುಮಾರು ರೂ 3000 ಮೌಲ್ಯದ 166 ಗ್ರಾಂ ಗಾಂಜಾ, ಸುಮಾರು ರೂ 40,000 ಮೌಲ್ಯದ ದ್ವಿಚಕ್ರ ವಾಹನ ಮತ್ತು ಸುಮಾರು ರೂ 12,000 ಮೌಲ್ಯದ ಮೊಬೈಲ್ ಪೋನ್ ನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ
December 9, 2024
7:15 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು | ಸಾರ್ವಜನಿಕರ ಜಾಗೃತಿಗಾಗಿ ಅರಿವು ಕಾರ್ಯಕ್ರಮ
November 15, 2024
10:56 PM
by: The Rural Mirror ಸುದ್ದಿಜಾಲ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror