ಸುಳ್ಯ: ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದ್ ನಮಾಝ್ ಖುತುಬಾಕ್ಕೆ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ನೇತೃತ್ವ ನೀಡಿದರು. ಈ ಸಂದರ್ಭದಲ್ಲಿ ಮಳೆಗಾಗಿ ಸರ್ವ ಜನರು ಶಾಂತಿ ಸೌಹಾರ್ದತೆಯಲ್ಲಿ ಬಾಳಿ ನಿರಾಶ್ರಿತರು ಬಡವರಿಗೆ ಸಹಾಯಕಾರಿಯಾಗಿ ಎಂದು ಈದ್ ಸಂದೇಶ ನೀಡಿದರು.
ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲಾ ಮಲ್ನಾಡ್ ,ಅನ್ಸಾರಿಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್,ಅನ್ಸಾರ್ ಅಧ್ಯಕ್ಷ ಹಾಜಿ ಮುಸ್ತಫಾ ಜನತಾ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ನ.ಪಂ ಸದಸ್ಯರಾದ ಉಮ್ಮರ್ ಕೆ.ಎಸ್,ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್, ಜಟ್ಟಿಪಳ್ಳ ಮಸೀದಿ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಗಾಂಧಿನಗರ ಜಮಾಯತ್ ಕಮಿಟಿ ಉಪಾಧ್ಯಕ್ಷ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಸೇರಿದಂತೆ ಹಲವಾರು ಈದ್ ನಮಾಝ್ ನಲ್ಲಿ ಭಾಗವಹಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel