ಗಾಂಧೀಜಿ ಎಲ್ಲರ ಆತ್ಮದ ಸೊತ್ತು- ಮೋಹನ್ ಸೋನ

October 2, 2019
5:42 PM

ಸುಳ್ಯ: ಮಹಾತ್ಮಾ ಗಾಂಧೀಜಿಯವರು ಎಲ್ಲರ ಆತ್ಮದ ಸೊತ್ತು. ಗಾಂಧೀಜಿಯ ಮನಸ್ಸು ಎಲ್ಲೆಡೆ ಕೆಲಸ ಮಾಡ್ತಾ ಇದೆ. ಪ್ರತಿಯೊಬ್ಬರ ಮನಸ್ಸಿನಲ್ಲಿ ಗಾಂಧೀಜಿ ನೆಲೆಯಾಗಬೇಕು. ಆ ಮೂಲಕ ಗಾಂಧೀಜಿಯ ಕಲ್ಪನೆಯ ನಾಡು ಸಾಕಾರಗೊಳ್ಳಬೇಕು ಎಂದು ಕಲಾವಿದ, ನಾಟಕಕಾರ ಮೋಹನ್ ಸೋನ ಹೇಳಿದ್ದಾರೆ.

Advertisement

ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಬೆಳ್ಳಾರೆಯಿಂದ ಸುಳ್ಯಕ್ಕೆ ನಡೆದ ಗಾಂಧಿ ನಡಿಗೆ ಕಾರ್ಯಕ್ರಮಕ್ಕೆ ಸೋಣಂಗೇರಿಯಲ್ಲಿ ನೀಡಿದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಸುಗುಣ ಗೌಡ, ರುಕ್ಮಯ್ಯ ಗೌಡ, ಬಾಲಕೃಷ್ಣ ಆಳ್ವ, ಮೋಂಟಡ್ಕ ರಾಘವ ಗೌಡ, ದೇರ್ಲ ನಾರಾಯಣ ರೈ, ಕೃಷ್ಣ ಸ್ವಾಮಿ ಕುಕ್ಕಂದೂರು, ಪುಟ್ಟ ಅಜಕ್ಕಳಮನೆ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ನ.ಪಂ.ಮುಖ್ಯಾಧಿಕಾರಿ ಎನ್.ಮತ್ತಡಿ, ಜಾಲ್ಸೂರು ಗ್ರಾ.ಪಂ.ಉಪಾಧ್ಯಕ್ಷ ದಿನೇಶ್ ಅಡ್ಕಾರ್, ಗೌರಿ ಶಂಕರ ಎಂ, ಶಾಲಾ ಮುಖ್ಯ ಶಿಕ್ಷಕಿ ರೇವತಿ, ಗಾಂಧಿ ಚಿಂತನಾ ವೇದಿಕೆಯ ಸಂಚಾಲಕರಾದ ಹರೀಶ್ ಬಂಟ್ವಾಳ್, ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ ಉಪಸ್ಥಿತರಿದ್ದರು.

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನೆಹರೂ ಸ್ಮಾರಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಡಾ.ಪ್ರಭಾಕರ ಶಿಶಿಲ, ಎಂ.ಡಿ.ವಿಜಯಕುಮಾರ್, ಪೂವಪ್ಪ ಕಣಿಯೂರು ಮತ್ತಿತರರು ನಡಿಗೆಯಲ್ಲಿ ಭಾಗವಹಿಸಿದ್ದರು.

Advertisement

ಬೆಳಿಗ್ಗೆ ಒಂಭತ್ತು ಗಂಟೆಗೆ ಬೆಳ್ಳಾರೆಯಿಂದ ಆರಂಭಗೊಂಡ ನಡಿಗೆ ಮೂರೂವರೆ ಗಂಟೆಗೆ ಸುಳ್ಯಕ್ಕೆ ಆಗಮಿಸಿತು. ಜ್ಯೋತಿ ಸರ್ಕಲ್ ನಲ್ಲಿ ಜಾಥಾಕ್ಕೆ ಸ್ವಾಗತ ನೀಡಲಾಯಿತು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group