ಗುಡ್ಡ ಕುಸಿದ ತೋರ ಗ್ರಾಮಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ : ಕೇಂದ್ರ ಸರಕಾರದಿಂದ ಅಗತ್ಯ ನೆರವು ನೀಡುವ ಭರವಸೆ

August 26, 2019
1:00 PM

ಮಡಿಕೇರಿ  :ಮಹಾಮಳೆಯ ಗುಡ್ಡ ಕುಸಿತದಿಂದ ಜೀವಹಾನಿಯಾದ ತೋರ ಗ್ರಾಮದ ಘಟನಾ ಸ್ಥಳಕ್ಕೆ ಸಂಸದ ಪ್ರತಾಪ ಸಿಂಹ ಅವರು ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಭೂ ಕುಸಿತದಿಂದ ಕುಟುಂಬದ ಸದಸ್ಯರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಪ್ರಭು ಕುಮಾರ್ ಭಟ್ ಮತ್ತು ಹರೀಶ್ ಅವರನ್ನು ಭೇಟಿಯಾಗಿ, ಸಾಂತ್ವನ ನುಡಿದ ಸಂಸದರು, ಇದೇ ಸಂದರ್ಭ ನಾಪತ್ತೆಯಾದವರ ಶೋಧ ಕಾರ್ಯಾಚರಣೆಯನ್ನು ವೀಕ್ಷಿಸಿ, ತಂಡದ ಮುಖ್ಯಸ್ಥರೊಂದಿಗೆ ಕಾರ್ಯಾಚರಣೆಯ ಮಾಹಿತಿ ಪಡೆದರು.

ಸೂರು ಒದಗಿಸುವ ಭರವಸೆ- ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಕೇಂದ್ರ ಸರಕಾರವು ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ ಸಂಸದರು, ರಾಜ್ಯ ಸರಕಾರ ಸಂತ್ರಸ್ತರಿಗೆ ನೀಡಿದ ಪರಿಹಾರದೊಂದಿಗೆ ಕೇಂದ್ರ ಸರಕಾರದಿಂದಲೂ ಪರಿಹಾರ ಧನವನ್ನು ನೀಡಲಾಗುತ್ತದೆಂದು ಸ್ಪಷ್ಟಪಡಿಸಿದರು.

ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸರಕಾರಿ ಜಮೀನು ಅಥವ ಖಾಸಗಿ ಜಮೀನನ್ನು ಸರಕಾರದ ಮೂಲಕ ಖರೀದಿಸಿ ಸೂರು ಒದಗಿಸುವ ಭರವಸೆಯನ್ನು ನೀಡಿ, ಪ್ರಾಕೃತಿಕ ವಿಕೋಪದಲ್ಲಿ ಕೃಷಿ ಫಸಲು ಹೊಂದಿದ ಭೂಮಿಯನ್ನು ಹಲವರು ಕಳೆದುಕೊಂಡಿದ್ದಾರೆ. ಇಂತಹವರಿಗೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭ ತಾಲ್ಲೂಕು ತಹಶೀಲ್ದಾರ್ ಪುರಂದರ ಅವರಿಂದ ಪರಿಹಾರ ಕಾರ್ಯಗಳ ಬಗ್ಗೆ ಸಂಸದರು ಮಾಹಿತಿ ಪಡೆದುಕೊಂಡರು.
ಸಂಸದರ ತೋರ ಭೇಟಿ ಸಂದರ್ಭ ಕಂದಾಯ ಅಧಿಕಾರಿ ಪಳಂಗಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ಜಿಪಂ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ತಾಪಂ ಸದಸ್ಯರಾದ ಬಿ.ಎಂ. ಗಣೇಶ್, ಪಿಡಿಒ ಪ್ರಮೋದ್ ಕುಮಾರ್ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror