ಗುತ್ತಿಗಾರು ಒಂದನೇ ತರಗತಿ ಆಂಗ್ಲಮಾಧ್ಯಮ ತರಗತಿ ಉದ್ಘಾಟನೆ

June 9, 2019
12:22 PM

ಗುತ್ತಿಗಾರು: ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ಆಂಗ್ಲಮಾಧ್ಯಮ ತರಗತಿ ಉದ್ಘಾಟನೆ ಮತ್ತು ಪೋಷಕರ ಸಭೆ ಶನಿವಾರ  ನಡೆಯಿತು.

Advertisement
Advertisement

ಗುತ್ತಿಗಾರಿನ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲಮಾಧ್ಯಮ‌ ತರಗತಿಯನ್ನು ಉದ್ಘಾಟಿಸಿ‌ದ ಶಾಸಕ ಅಂಗಾರ, “ಮಕ್ಕಳಿಗೆ ಮೌಲ್ಯಯುತ, ಸಂಸ್ಕಾರಭರಿತ ಶಿಕ್ಷಣದ ಅವಶ್ಯಕತೆ ಇದ್ದು, ಶಿಕ್ಷಕರು ಈ ನಿಟ್ಟಿನಲ್ಲಿ ಪರಿಣತಿ ಪಡೆಯಬೇಕು ಎಂದರು.

ಮುಖ್ಯ ಅತಿಥಿಯಾಗಿ ‌ಮಾತನಾಡಿದ ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ “ಪೋಷಕರಿಗೆ ಸರಕಾರಿ ಶಾಲೆಗಳ ಬಗ್ಗೆ ಅಭಿಮಾನ ಇರಬೇಕು. ಅಲ್ಲದೇ ಸರಕಾರ ಕೂಡಾ ಶಾಲೆಗಳಿಗೆ ಅವಶ್ಯಕ ಸೌಲಭ್ಯಗಳನ್ನು ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುತ್ತಿಗಾರು ಗ್ರಾ.ಪಂ ಅಧ್ಯಕ್ಷ ಅಚ್ಯುತ ಗುತ್ತಿಗಾರು ವಹಿಸಿದ್ದರು. ಗ್ರಾ.ಪಂ ಸದಸ್ಯ ವೆಂಕಟ್ ವಳಲಂಬೆ, ಉಪಾಧ್ಯಕ್ಷೆ ಸವಿತಾ ಕುಳ್ಳಂಪಾಡಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ , ಅರೆಭಾಷೆ ಅಕಾಡೆಮಿ ಸದಸ್ಯ ದಿನೇಶ್ ಹಾಲೆಮಜಲು ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ತೇಜಮ್ಮ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ವೇದಿಕೆಯಲ್ಲಿ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್, ನಿರ್ದೇಶಕ ಬಿ.ಕೆ.ಬೆಳ್ಯಪ್ಪ ಗೌಡ, ಮಾಜಿ ಜಿ.ಪಂ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಿಂಗರಾಜ್ ಜತ್ತಿಲ, ಶಾಲಾ ಕಟ್ಟಡ ಸಮಿತಿ ಅಧ್ಯಕ್ಷ ಶಿವರಾಮ‌ ಕರುವಜೆ ಉಪಸ್ಥಿತರಿದ್ದರು.

Advertisement

ಎಸ್.ಡಿ.ಎಂ.ಸಿ ಅಧ್ಯಕ್ಷ ಎನ್.ಟಿ. ಹೊನ್ನಪ್ಪ ಗೌಡ ಸ್ವಾಗತಿಸಿ , ಮುಖ್ಯ ಶಿಕ್ಷಕಿ ಕಮಲಾಕ್ಷಿ.ಪಿ ವಂದಿಸಿದರು. ಶಿಕ್ಷಕ ಶಶಿಧರ ಮಾವಿನಕಟ್ಟೆ ನಿರೂಪಿಸಿದರು.

 

 

 

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ
ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group