ಗುರುಂಪುನಿಂದ-ನಾಗಪಟ್ಟಣದವರೆಗೆ ಆರಂಭಗೊಳ್ಳದ ರಸ್ತೆ ದುರಸ್ಥಿ: ನಗರ ಪಂಚಾಯತ್ ಎದುರು ನಾಗರಿಕರ ಪ್ರತಿಭಟನೆ

December 7, 2019
9:45 PM

ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಗುರುಂಪುನಿಂದ-ನಾಗಪಟ್ಟಣದವರೆಗೆ 15 ದಿನಗಳೊಳಗೆ ರಸ್ತೆ ದುರಸ್ಥಿ ಆರಂಭಗೊಳಿಸುತ್ತೇವೆ ಎಂದು ಭರವಸೆ ನೀಡಿದ ನ.ಪಂ
ಅಧಿಕಾರಿಗಳು ಇನ್ನೂ ಕಾಮಗಾರಿ ಆರಂಭಿಸದಿರುವ ಹಿನ್ನಲೆಯಲ್ಲಿ ನ.ಪಂ. ವಿರುದ್ಧ ನಗರ ಪಂಚಾಯತ್ ಮುಂಭಾಗ ನಾಗರಿಕರು ಶನಿವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈಯವರು ಕಳೆದ ಬಾರಿ ಸೇತುವೆ ಬಳಿ ಪ್ರತಿಭಟನೆ ನಡೆಸಿದಾಗ 15 ದಿನದಲ್ಲಿ ಗುರುಂಪಿನಿಂದ ನಾಗಪಟ್ಟಣದವರೆಗಿನ ರಸ್ತೆ ಹೊಂಡ ಮುಚ್ಚುವ ಕಾಮಗಾರಿ ನಡೆಸುವ ಭರವಸೆ ನೀಡಿದ್ದರೂ ಆರಂಭಿಸಿಲ್ಲ. ನಾವು ಗ್ರಾಮಸ್ಥರ ಜತೆ ಸೇರಿ ರಸ್ತೆ ಅಭಿವೃದ್ಧಿ ಗೆ ಒತ್ತಾಯಿಸಿದರೆ ಅದಕ್ಕೆ ಶಾಸಕರು ಕಾಂಗ್ರೆಸ್ ಪ್ರತಿಭಟನೆ ಎಂದು ಹೇಳಿಕೆ ನೀಡುತ್ತಾರೆ. ಆ ರೀತಿಯ ಹೇಳಿಕೆ ನೀಡುವುದಕ್ಕಿಂತ ಶಾಸಕರು ಕೆಲಸ ಮಾಡಿ ತೋರಿಸಲಿ ಎಂದು ಆಗ್ರಹಿಸಿದರು.

ನ.ಪಂ‌.ಸದಸ್ಯ ಎಂ.ವೆಂಕಪ್ಪ ಗೌಡ ಮಾತನಾಡಿ ಕೂಡಲೇ ರಸ್ತೆ ದುರಸ್ಥಿ ಆರಂಭಿಸುವಂತೆ ಒತ್ತಾಯಿಸಿದರು. ಪ್ರಮುಖರಾದ ತೇಜಕುಮಾರ್ ಬಡ್ಡಡ್ಕ, ಸತ್ಯಕುಮಾರ್ ಆಡಿಂಜ, ಡೇವಿಡ್‌ ಧೀರಾ ಕ್ರಾಸ್ತ ಮಾತನಾಡಿದರು.  ಮುಖಂಡರಾದ ಬೆಟ್ಟ ರಾಜಾರಾಂ ಭಟ್, ಬೀರಾ ಮೊಯ್ದೀನ್, ಶರೀಫ್ ಕಂಠಿ, ಧರ್ಮಪಾಲ ಕೊಯಿಂಗಾಜೆ, ಶ್ರೀಲತಾ ಪ್ರಸನ್ನ, ತಿರುಮಲೇಶ್ವರಿ, ನಂದರಾಜ ಸಂಕೇಶ, ಭವಾನಿಶಂಕರ ಕಲ್ಮಡ್ಕ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬಳಿಕ ಆಗಮಿಸಿದ ನ.ಪಂ.ಮುಖ್ಯಾಧಿಕಾರಿ ಮತ್ತಡಿಯವರನ್ನು ರಸ್ತೆ ಅಭಿವೃದ್ಧಿ ಪಡಿಸದ ಕುರಿತು ಪ್ರಶ್ನಿಸಿದರು. ಮಾತುಕತೆ ನಡೆದು ರಸ್ತೆ ದುರಸ್ಥಿ ನಡೆಸುವುದಾಗಿ ಮುಖ್ಯಾಧಿಕಾರಿ ಭರವಸೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror