ಗೇರು ಸಂಶೋಧನಾ ನಿರ್ದೇಶನಾಲಯದಿಂದ ಕೃಷಿ ಸಲಕರಣೆಗಳ ವಿತರಣೆ

June 14, 2020
11:29 AM

ಪುತ್ತೂರು: ಕೇಂದ್ರ ಸರಕಾರದ ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಕೊಡಮಾಡುವ ಸವಲತ್ತುಗಳನ್ನು ಪುತ್ತೂರಿನ ಮೊಟ್ಟೆತ್ತಡ್ಕದ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಫಲಾನುಭವಿಗಳಿಗೆ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್ ರವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್,  ಪರಿಶಿಷ್ಟ ಜಾತಿಯವರು ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಕೇಂದ್ರ ಸರ್ಕಾರ ಸಾಕಷ್ಟು ನೆರವನ್ನು ಕೊಡುತ್ತಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು.

Advertisement
Advertisement

ಈ ಸಂದರ್ಭದಲ್ಲಿ ಅವರು ಆಯ್ದ ರೈತರಿಗೆ ತೋಟಗಳಿಗೆ ಔಷಧಿ ಸಿಂಪಡಣಾ ಯಂತ್ರಗಳನ್ನು ಮತ್ತು ಮರವೇರುವ ಅಲ್ಯುಮಿನಿಯಂನ ಏಣಿಗಳನ್ನು ವಿತರಿಸಿದರು.

Advertisement

ಅತಿಥಿಗಳನ್ನು ಹಾಗೂ ಫಲಾನುಭವಿಗಳನ್ನು ಸ್ವಾಗತಿಸಿದ ಸಂಸ್ಥೆಯ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷದಿಂದ ನಡೆಯುತ್ತಿರುವ ಈ ಉಪಯೋಜನೆಗಳ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಮುಂದಿನ ವರ್ಷದಲ್ಲಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಜನಾಂಗದವರಿಗೆ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಹಳಷ್ಟು ಧನ ಸಹಾಯ ಕೇಂದ್ರದಿಂದ ಬಂದಿದ್ದು ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆಯೆಂದರು. ಗೇರು ಅಥವಾ ಇತರ ಕೃಷಿ ತೋಟಗಳ ನಿರ್ಮಾಣ, ನಿರ್ವಹಣೆ, ಬೇಕಾದ ಸಲಕರಣೆಗಳು, ಯಂತ್ರ ಉಪಕರಣಗಳು, ಕೋಳಿ, ಆಡು ಸಾಕಾಣಿಕೆ, ಹೈನುಗಾರಿಕೆ, ಜೇನು ಸಾಕಾಣೆ, ವೃತ್ತಿ ತರಬೇತಿ, ಟೈಲರಿಂಗ್ ಮುಂತಾದ ಕಸುಬು ಮಾಡುವವರಿಗೆ ಈ ಯೋಜನೆಗಳು ಜೀವನವನ್ನು ಸುಧಾರಿಸುವಲ್ಲಿ ಹೆಚ್ಚು ಸಹಾಯವಾಗಲಿದೆಯೆಂದರು.

ಕಾರ್ಯಕ್ರಮವನ್ನು  ಡಾ. ಈ. ಈರದಾಸಪ್ಪ ನಿರೂಪಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ
ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror