ಗ್ರಾಮೀಣ ಭಾಗದ ಸುಂದರ ತಾಣ :ಹಾಲ್ನೊರೆಯಂತೆ ತುಂಬಿ ಹರಿಯುವ ಚಾಮಡ್ಕ ಜಲಪಾತ…!

August 30, 2019
8:00 AM

ಗ್ರಾಮೀಣ ಭಾಗದ ಪ್ರಕೃತಿ ಸೌಂದರ್ಯಗಳು ನೋಡಲು ಖುಷಿ. ಇಂದಿಗೂ ಸಹಜತೆಯನ್ನು ಕಾಯ್ದುಕೊಂಡಿರುವ ಜಲಪಾತಗಳು, ಪ್ರಕೃತಿ ತಾಣಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇದರ ಜೊತೆಗೆ ಎಚ್ಚರಿಕೆಯೂ ಇದೆ. ಇದೇ ಸೌಂದರ್ಯುವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕಾರಣದಿಂದ ಫೋಕಸ್..

Advertisement

ಮಳೆ ಬಂತೆಂದರೆ ಬಹುತೇಕ ಜಲಪಾತಗಳು ಮೈತುಂಬಿ ಹರಿಯುತ್ತದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದಲ್ಲಿನ ಚಾಮಡ್ಕ ಜಲಪಾತವೂ ಮೈತುಂಬಿ ಹರಿಯಲು ಆರಂಭಿಸುತ್ತದೆ. ವಿಶೇಷವೆಂದರೆ ಬೇರೆ ಕಡೆಗಳಲ್ಲಿ ಎಲ್ಲಿಯೂ ಕಾಣ ಸಿಗದ ರೀತಿಯ ಚಾಮಡ್ಕ ಜಲಪಾತದ ನೀರು ಪಶ್ಚಿಮ ದಿಕ್ಕಿನಿಂದ ಪೂರ್ವ ಧಿಕ್ಕಿಗೆ ಹರಿಯುತ್ತದೆ. ಹಾಲ್ನೊರೆಯಂತೆ ಹರಿಯುವ ಈ ಜಲಪಾತ ಹಿರಿಯ ಸಾಹಿತಿ ಡಾ.ಶಿವರಾಮ ಕಾರಂತ ಅವರಂತಹವರಿಗೂ ಪ್ರೇರಣೆ ನೀಡಿತ್ತು.

ಬಂಟಮಲೆಯಲ್ಲಿ ಹುಟ್ಟುವ ಈ ನೀರಿನ ತೊರೆ ಚಾಮಡ್ಕ ಜಲಪಾತ ಸೃಷ್ಠಿಸಿ ಕಂದಡ್ಕದ ಕೂಟೇಲಿನಲ್ಲಿ ಪಯಸ್ವಿನಿ ನದಿ ಸೇರುತ್ತದೆ. ಸೇತುವೆ ಕೆಳಭಾಗದಲ್ಲಿ ಹರಿದು ಬರುವ ನೀರು ಎತ್ತರದಿಂದ ಕೆಳಗೆ ಬೀಳುವುದು ಮೈನವಿರೇಳಿಸುವಂತಹದ್ದು. ಅಲ್ಲಿಂದ ಕೆಳಬೀಳುವ ನೀರು ಮೂರು ತೊರೆಗಳಾಗಿ ಹರಿಯುತ್ತಾ ಹೋಗುವುದರಿಂದ ಅಪಾಯಕಾರಿಯೂ ಆಗಿರುವುದಿಲ್ಲ. ಮೇಲ್ನೋಟಕ್ಕೆ ನೀರಿನ ಪ್ರವಾಹವೇ ಕಾಣಿಸಿದರೂ ಕೆಳಗೆ ಹೋಗಿ ನಿಂತಾಗ ಅದರ ಸೊಬಗು ಖುಷಿ ಕೊಡುತ್ತದೆ.

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ:ಕಳೆದ ಎರಡು ವಾರದ ಹಿಂದೆ ಎಡೆಬಿಡದ್ದೆ ಸುರಿಯುತ್ತಿದ್ದ ಮಳೆಯಿಂದ ಇಂದಿಗೂ ನೀರಿನ ಹರಿವಿನ ಮಟ್ಟದಲ್ಲಿ ಹೆಚ್ಚಳವಿದ್ದು ಪ್ರವಾಸಿಗರು ನಿತ್ಯವೂ ಬರುತ್ತಲೇ ಇದ್ದಾರೆ. ಪುಟ್ಟ ಮಕ್ಕಳಿಂದ ವಯೋವೃದ್ದರೂ ಆತಂಕವಿಲ್ಲದೇ ಓಡಾಡಬಹುದಾಗಿದೆ. ಸುತ್ತಮುತ್ತಲಿನ ಮನೆಗಳ ಮಕ್ಕಳು ರಜಾ ದಿನಗಳನ್ನು ಇಲ್ಲಿಯೇ ಕಳೆಯುತ್ತಿರುತ್ತಾರೆ. ಒಂದೆರಡು ಕಿರು ಚಿತ್ರಗಳೂ ಇಲ್ಲಿ ಚಿತ್ರೀಕರಣವಾಗಿದೆ.  ಅಂದು ಸಾಹಿತಿ ಡಾ.ಶಿವರಾಮ ಕಾರಂತ ಅವರು ಇದೇ ಜಲಪಾತದ ಪಕ್ಕವೇ ಕುಳಿತು ಕಾದಂಬರಿಯನ್ನು ಬರೆದಿದ್ದರು ಎಂದು ಸ್ಥಳೀಯರು ಹೇಳುತ್ತಾರೆ.

ಹೀಗೆ ಹೋಗಬಹುದು :ಬೆಳ್ಳಾರೆಯಿಂದ 10 ಕಿ.ಮಿ ದೂರದಲ್ಲಿರುವ ಜಲಪಾತಕ್ಕೆ ಹೋಗಲು ಸುಗಮವಾದ ದಾರಿಯಿದೆ. ಕಾಡು ಬದಿಯ ಮಾರ್ಗದಲ್ಲೇ ಬಸ್ಸು ಅಥವಾ ವಾಹನದಲ್ಲಿ ಕುಕ್ಕುಜಡ್ಕ ಮಾರ್ಗವಾಗಿ ಕಲ್ಮಡ್ಕ ರಸ್ತೆಯ ಮೂಲಕ ಪ್ರಯಾಣ ಮುಂದುವರಿಸಿದಾಗ ಡಿ.ಆರ್.ಜಿ ವೃತ್ತದಲ್ಲಿ ಬಲಬದಿಯಾಗಿ ಅರ್ಧ ಕಿ.ಮೀ ಕ್ರಮಿಸುವಷ್ಟರಲ್ಲಿ ಭೋರ್ಗರೆಯುವ ಜಲಪಾತದ ಸೊಬಗು ಕಾಣುತ್ತದೆ. ಸೇತುವೆ ಬದಿಯಲ್ಲೇ ವಾಹನ ನಿಲ್ಲಿಸಿ ನಡೆದುಕೊಂಡು  ಕಾಲುದಾರಿಯಲ್ಲಿ ಕೆಳಗೆ ಇಳಿದರೆ ಜಲಪಾತದ ಸ್ಥಳಕ್ಕೆ ತಲುಪಲು ಸಾಧ್ಯ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ
April 9, 2025
6:59 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ
April 9, 2025
2:49 PM
by: The Rural Mirror ಸುದ್ದಿಜಾಲ
ಪುತ್ತೂರು ಜಾತ್ರೆ | ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ!
April 9, 2025
7:30 AM
by: The Rural Mirror ಸುದ್ದಿಜಾಲ
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ
April 8, 2025
9:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group