ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ : ಇಬ್ಬರ ದಾರುಣ ಸಾವು

May 4, 2019
10:11 PM

ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ.

ಯಾವುದೇ ಗಾಳಿಯೂ ಇರಲಿಲ್ಲ  ಮಳೆಯೂ ಇರಲಿಲ್ಲ. ಇದ್ದಕ್ಕಿದ್ದಂತೆ ನಡೆದ ಈ ಘಟನೆ ಜನರನ್ನು ತಲ್ಲಣಗೊಳಿಸಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ 4 ಜನ  ಪಯಣಿಸುತ್ತಿದ್ದರು. ಕಾರು ಸಿದ್ಧವನ ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಮೇ ಫ್ಲವರ್  ಬೃಹತ್ ಮರವೊಂದು ಬುಡಸಮೇತ ಕುಸಿದು ಕಾರಿನ ಮೇಲೆ ಉರುಳಿದೆ. ಕಾರಿನ ಹಿಂಬದಿ ಕುಳಿತಿದ್ದ ಉಜಿರೆ ನಿನ್ನಿಕಲ್ಲು ನಿವಾಸಿ ಮೂಲತ ಪುದುವೆಟ್ಟು ಎಂಬಲ್ಲಿನ ಮುಕುಂದಅವರ ಪುತ್ರ ವಿಘ್ನೇಶ್ (21) ಸ್ಥಳದಲ್ಲೇ ಮೃತಪಟ್ಟರೆ , ಮಡಂತ್ಯಾರು ನಿವಾಸಿ ಕ್ಷಿತಿಜ್‍ಜೈನ್ (24) ಎಂಬುವರುಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪುಂಜಾಲಕಟ್ಟೆ ಎಂಬಲ್ಲಿ ಹೋಗುತ್ತಿದ್ದಾಗ  ಮೃತಪಟ್ಟಿದ್ದಾರೆ.

 

ಸುಶಾಂತ ಹಾಗು ಹರ್ಷಿತ್ ಎಂಬ ಇನ್ನಿಬ್ಬರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಲ್ಲಿ  ಕಾರಿನ ಏರ್ ಬ್ಯಾಗ್ ತೆರೆದುಕೊಂಡದ್ದರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನರೂ ಮಿತ್ರರಾಗಿದ್ದು ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror