ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ : ಇಬ್ಬರ ದಾರುಣ ಸಾವು

May 4, 2019
10:11 PM

ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ.

ಯಾವುದೇ ಗಾಳಿಯೂ ಇರಲಿಲ್ಲ  ಮಳೆಯೂ ಇರಲಿಲ್ಲ. ಇದ್ದಕ್ಕಿದ್ದಂತೆ ನಡೆದ ಈ ಘಟನೆ ಜನರನ್ನು ತಲ್ಲಣಗೊಳಿಸಿದೆ.

Advertisement

ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ 4 ಜನ  ಪಯಣಿಸುತ್ತಿದ್ದರು. ಕಾರು ಸಿದ್ಧವನ ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಮೇ ಫ್ಲವರ್  ಬೃಹತ್ ಮರವೊಂದು ಬುಡಸಮೇತ ಕುಸಿದು ಕಾರಿನ ಮೇಲೆ ಉರುಳಿದೆ. ಕಾರಿನ ಹಿಂಬದಿ ಕುಳಿತಿದ್ದ ಉಜಿರೆ ನಿನ್ನಿಕಲ್ಲು ನಿವಾಸಿ ಮೂಲತ ಪುದುವೆಟ್ಟು ಎಂಬಲ್ಲಿನ ಮುಕುಂದಅವರ ಪುತ್ರ ವಿಘ್ನೇಶ್ (21) ಸ್ಥಳದಲ್ಲೇ ಮೃತಪಟ್ಟರೆ , ಮಡಂತ್ಯಾರು ನಿವಾಸಿ ಕ್ಷಿತಿಜ್‍ಜೈನ್ (24) ಎಂಬುವರುಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪುಂಜಾಲಕಟ್ಟೆ ಎಂಬಲ್ಲಿ ಹೋಗುತ್ತಿದ್ದಾಗ  ಮೃತಪಟ್ಟಿದ್ದಾರೆ.

 

Advertisement

ಸುಶಾಂತ ಹಾಗು ಹರ್ಷಿತ್ ಎಂಬ ಇನ್ನಿಬ್ಬರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಲ್ಲಿ  ಕಾರಿನ ಏರ್ ಬ್ಯಾಗ್ ತೆರೆದುಕೊಂಡದ್ದರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನರೂ ಮಿತ್ರರಾಗಿದ್ದು ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror