ಚೌಕಿದಾರ್ ಹೆಸರಿನಲ್ಲಿ ದೇಶವನ್ನೇ ಲೂಟಿಗೈದ ಮೋದಿ ಸರಕಾರ

April 15, 2019
11:08 AM
ಮಂಗಳೂರು: *ಕಳೆದ 5 ವರ್ಷಗಳ ಹಿಂದೆ ಕಪ್ಪುಹಣ ತರುವುದಾಗಿ, ಭ್ರಷ್ಟಾಚಾರ ನಿಗ್ರಹಿಸುವುದಾಗಿ, ಅಚ್ಛೇದಿನ್,ಸಬ್ ಕಾ ಸಾಥ್– ಸಬ್ ಕಾ ವಿಕಾಸ್ ಮುಂತಾದ ಪೊಳ್ಳು ಭರವಸೆಗಳನ್ನು ನೀಡಿ,ತನ್ನನ್ನು ತಾನು ಚಾಯ್ ವಾಲಾ,ಫಕೀರ ಮುಂತಾದ ಹೆಸರಿನಿಂದ ಕರೆಸಿಕೊಂಡು ದೇಶದ ಜನರಿಗೆ ಮಂಕುಬೂದಿ ಎರಚಿ ಇಡೀ ದೇಶದ ಆರ್ಥಿಕತೆಯನ್ನೇ ಸರ್ವನಾಶ ಮಾಡಿ ಜನರ ಬದುಕನ್ನು ಸಂಕಷ್ಠಕ್ಕೆ ದೂಡಿದ ನರೇಂದ್ರ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೇರಿದರೆ ದೇಶದ ಜಾತ್ಯಾತೀತ ಪರಂಪರೆ ಮತ್ತಷ್ಟು ಅಪಾಯವನ್ನು ಎದುರಿಸಲಿದೆ* ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ರವರು ತೀವ್ರ ಆತಂಕವನ್ನು ವ್ಯಕ್ತಪಡಿಸಿದರು.
ಅವರು ಉರ್ವಾಸ್ಟೋರಿನಲ್ಲಿ ಜರುಗಿದ CPIM ಪಕ್ಷದ ಕಾರ್ಯಕರ್ತರ,ಹಿತೈಷಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೇಶ ಕಟ್ಟಬೇಕಾದ ಯುವ ಜನತೆಗೆ ತಾನು ಅಧಿಕಾರಕ್ಕೆ ಬಂದರೆ ವರ್ಷಕ್ಕೆ 2 ಕೋಟಿ ಉದ್ಯೋಗ ಸ್ರಷ್ಠಿಸುವುದಾಗಿ, ಅದಕ್ಕಾಗಿ ಮೇಕ್ ಇನ್ ಇಂಡಿಯಾ ಎಂಬ ಘೋಷಣೆಯನ್ನು ನೀಡಿದ ನರೇಂದ್ರ ಮೋದಿಯವರು, ಕಳೆದ 5 ವರ್ಷದಲ್ಲಿ ಸೃಷ್ಠಿಯಾಗಬೇಕಾಗಿದ್ದ10 ಕೋಟಿ ಉದ್ಯೋಗದಲ್ಲಿ ಕನಿಷ್ಠ 10 ಲಕ್ಷ ಉದ್ಯೋಗವೂ ಸೃಷ್ಠಿಯಾಗಿಲ್ಲ ಎಂಬುದನ್ನು ಕೇಂದ್ರ ಸರಕಾರದ ಇಲಾಖೆಯೇ ದೃಢಪಡಿಸಿದೆ. ಈಗ ತಾನು ದೇಶ ಕಾಯುವ ಕಾವಲುಗಾರನಂತೆ ಬಿಂಬಿಸಿ,ಚೌಕಿದಾರ್ ಹೆಸರಿನಲ್ಲಿ ಮತ್ತೆ ದೇಶವನ್ನು ಲೂಟಿಗೈಯ್ಯಲು ಸಂಚು ರೂಪಿಸುತ್ತಿದೆ* ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಪಕ್ಷದ ನಾಯಕರಾದ ಮನೋಜ್ ಉರ್ವಾಸ್ಟೋರು ವಹಿಸಿದ್ದರು.ವೇದಿಕೆಯಲ್ಲಿ ಸಿಪಿಎಂ ನಾಯಕರಾದ ಪ್ರದೀಪ್, ರಘುವೀರ್, ಕಿಶೋರ್,ಇಕ್ಬಾಲ್, ನಾಗೇಂದ್ರರವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror