ಜನರಿಗೆ ಒತ್ತಡ ತಂದು ಸಾಲ ವಸೂಲಿ ಮಾಡದಂತೆ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳಿಗೆ ತಹಶೀಲ್ದಾರ್ ಎಚ್ಚರಿಕೆ

November 20, 2019
9:32 PM

ಸುಳ್ಯ: ಜನರ ಮೇಲೆ ಒತ್ತಡ ಹೇರಿ ಸಾಲ ವಸೂಲಿ ಮಾಡಲು ಮುಂದಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದೆ. ಇದೇ ರೀತಿ ಮುಂದುವರಿದರೆ ಅಂತವರ ಮೇಲೆ ಕೇಸು ದಾಖಲಿಸಿ ಕ್ರಮ ಜರುಗಿಸಲಾಗುವುದು ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಕಿರು ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಕಚೇರಿಗೆ ಫೈನಾನ್ಸ್ ಪ್ರತಿನಿಧಿಗಳನ್ನು ಕರೆಸಿ ಮಾತನಾಡಿದ ತಹಶೀಲ್ದಾರ್ ಯಾವ ರೀತಿ ವ್ಯವಹಾರ ನಡೆಸುತ್ತಿದ್ದೀರಿ ಮತ್ತು ಕೊಟ್ಟ ಸಾಲಕ್ಕೆ ಎಷ್ಟು ಬಡ್ಡಿ ಹಾಕುತ್ತಿದ್ದೀರಿ, ಜತೆಗೆ ಆರ್‌ಬಿಐ ನಿಂದ ಪಡೆದ ಪರವಾನಿಗೆ ಪತ್ರ ಮತ್ತು ಅದರ ನಿಯಮದಂತೆ ವ್ಯವಹರಿಸುತ್ತಿರುವುದಕ್ಕೆ ದಾಖಲೆ ನೀಡಬೇಕು. ಅದನ್ನು ನಾವೂ ಪರಿಶೀಲಿಸುತ್ತೇವೆ. ನೀವು ನಿಯಮ ಮೀರಿ ವ್ಯವಹಾರ ನಡೆಸಿದ್ದು ಮತ್ತು ಜನರ ಮೇಲೆ ಒತ್ತಡ ಹೇರಿ ಸಾಲ ವಸೂಲಿ ಮಾಡುತ್ತಿರುವುದು ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಕೂಡ ತಮ್ಮ ಅಹವಾಲುಗಳನ್ನು ತಹಶೀಲ್ದಾರ್ ಮುಂದೆ ಇರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror