ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್ ಮುತ್ತಪ್ಪ ರೈ ನಿಧನ

May 15, 2020
9:11 AM

ಬೆಂಗಳೂರು:  ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಶುಕ್ರವಾರ ಬೆಳಗ್ಗೆ 2 ಗಂಟೆಗೆ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.

Advertisement
Advertisement

ಪುತ್ತೂರು ತಾಲೂಕಿನ ಕೆಯ್ಯೂರು ನಿವಾಸಿಯಾಗಿರುವ ಮುತ್ತಪ್ಪ ರೈ ಭೂಗತ ಲೋಕದಲ್ಲಿ ಗುರುತಿಸಿಕೊಂಡು ನಂತರ ಮನಪರಿವರ್ತನೆಯಾಗಿ ಸಮಾಜ ಸೇವೆಯಲ್ಲಿ  ತೊಡಗಿದ್ದರು. ಜಯಕರ್ನಾಟಕ ಸಂಘಟನೆಯ ಮೂಲಕ ಕನ್ನಡಿಗರಿಗೆ ನೆರವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.

ಮುತ್ತಪ್ಪ ರೈ ಅವರಿಗೆ ಇಬ್ಬರು ಮಕ್ಕಳಿದ್ದು, ಅವರ ಇಚ್ಚೆಯಂತೆ ಬಂಟ ಸಮುದಾಯದ ಸಂಪ್ರದಾಯದ ಪ್ರಕಾರ ಅವರ ಧರ್ಮಪತ್ನಿಯ ಸಮಾಧಿಯ ಬಳಿಯೇ ಬಿಡದಿಯಲ್ಲಿ  ಅಂತಿಮ ಸಂಸ್ಕಾರ ನಡೆಯಲಿದ್ದು ಮುತ್ತಪ್ಪ ರೈ ಅವರ ಹಿರಿಯ ವಿದೇಶದದಲ್ಲಿ ಇದ್ದಾರೆ. ಅವರು ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಅವರ ಕಿರಿಯ ಮಗ  ಎಲ್ಲಾ ಅಂತಿಮ ವಿಧಿವಿಧಾನ ನಡೆಸಲಿದ್ದು  ಕುಟುಂಬದ 25 ಜನ ಮಾತ್ರ ಭಾಗಿಯಾಗುತ್ತಾರೆ ಎಂದು ಮುತ್ತಪ್ಪ ರೈ ಅವರ ಆಪ್ತ ವಲಯ ತಿಳಿಸಿದೆ.

2013 ರಲ್ಲಿ ಇವರ ಪತ್ನಿ ರೇಖಾ ಅವರು ಅನಾರೋಗ್ಯದಿಂದ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ
ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |
October 10, 2024
7:49 AM
by: ದ ರೂರಲ್ ಮಿರರ್.ಕಾಂ
ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |
July 12, 2024
9:24 AM
by: The Rural Mirror ಸುದ್ದಿಜಾಲ
ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group