ಜಲಪ್ರಳಯದ ನಂತರ ಸಂಪರ್ಕ ಪಡೆದುಕೊಂಡ ಗ್ರಾಮಗಳು..!

May 18, 2019
11:00 AM

ಸಂಪಾಜೆ: ಜಲಪ್ರಳಯದ ನಂತರ ಅನೇಕರು ಹೇಳಿಬಿಟ್ಟರು, ಇನ್ನು ವರ್ಷಗಳವರೆಗೆ ಮಂಗಳೂರಿನಿಂದ ಜೋಡುಪಾಲ ಮಾರ್ಗವಾಗಿ  ಕೊಡಗು ಸಂಪರ್ಕ ಕಷ್ಟ ಅಂತ. ಆದರೆ ಒಂದೆರಡು ತಿಂಗಳಲ್ಲಿ  ನಮ್ಮ ಇಂಜಿನಿಯರ್ ಗಳು ಹೇಳಿದರು….” ಎರಡು ದಿನದಲ್ಲಿ ಕೊಡಗು ಸಂಪರ್ಕ ಸಾಧ್ಯ “.  ಇದು ನಮ್ಮ ದೇಶದ, ನಮ್ಮ ಜಿಲ್ಲೆಯ ಹೆಮ್ಮೆ.

ದೂರದ ಎಲ್ಲೋ ಪ್ರಾಕೃತಿಕ ವಿಕೋಪ ನಡೆದ ಸಂದರ್ಭ ಕೆಲವೇ ದಿನದಲ್ಲಿ ರಸ್ತೆ ಸಂಪರ್ಕ ಮಾಡಿದ ಸರಕಾರ, ಇಂಜಿನಿಯರ್ ಗಳು ಅಂತ ಆಗಾಗ ಹೇಳುತ್ತಾರೆ. ಇಲ್ಲೂ ಅಂತಹ ಇಂಜಿನಿಯರ್ ಗಳು ಇದ್ದಾರೆ ಎಂಬುದನ್ನು ಅಂದು ಸಾಬೀತು ಮಾಡಿದ್ದರು. ಅಂದಿನ ಜಲಪ್ರಳಯ ನೋಡಿದ ಎಲ್ಲರೂ ಹೇಳಿದ್ದು ಒಂದೇ ಮಾತು ” ಕೊಡಗು ಸಂಪರ್ಕ ಇನ್ನು ಕಷ್ಟ” . ಇದನ್ನು ಸವಾಲಾಗಿ ಸ್ವೀಕರಿಸಿ ನಮ್ಮ ಇಲಾಖೆಯ ಇಂಜಿನಿಯರ್ ಗಳ ತಂಡ ಸತತ ಪ್ರಯತ್ನದ ಮೂಲಕ ಗುಣಮಟ್ಟದ ರಸ್ತೆ ಮಾಡಿದ್ದರು. ಈ ಬಾರಿಯ ಮಳೆಗಾಲಕ್ಕೂ ಅದೇ ಮಾದರಿಯ ಮುಂಜಾಗ್ರತೆ ಕೈಗೊಳ್ಳುವ ಸಾಮರ್ಥ್ಯವೂ ಅವರಲ್ಲಿದೆ. ಅದಕ್ಕೆ ಬೇಕಾದ್ದು ಜನನಾಯಕರ ಇಚ್ಛಾಶಕ್ತಿ ಅಷ್ಟೇ.

ಸುಳ್ಯ- ಕೊಡಗು ರಸ್ತೆಯ ಬಗ್ಗೆ ಮಾತ್ರಾ ಹೇಳಿದರೆ ತಪ್ಪಾದೀತು. ಮೊಣ್ಣಂಗೇರಿಯ ತುದಿಯವರೆಗೆ ಕಾಂಕ್ರೀಟ್ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲಿನ ನಿವಾಸಿ ಜಯರಾಮ್ ಹೇಳುವುದು,” ಸರ್ ನಮಗೆ ಜಲಪ್ರಳಯದಿಂದ ಲಾಭ ಏನಾಯಿತು ಅಂದರೆ ನಮ್ಮ ಮನೆಯ ಪಕ್ಕದವರೆಗೆ ಕಾಂಕ್ರೀಟ್ ರಸ್ತೆ…”. ಲಕ್ಷಾಂತರ ರೂಪಾಯಿ ನಷ್ಟವಾಯಿತು, ಕೃಷಿ ಭೂಮಿ ಹಾನಿಯಾಯಿತು. ಆದರೆ ಸಂಪರ್ಕ ರಸ್ತೆಯೇ ನಾಶವಾಗಿತ್ತು, ಅದನ್ನು ತಕ್ಷಣ ಮಾಡಿಸಿ ಈಗ ಪೇಟೆಗೆ ಹೋಗುವಂತಾಗಿದೆ ಎಂದು ಸಾಮಾನ್ಯ  ವ್ಯಕ್ತಿಯೂ ಹೇಳುತ್ತಾನಾದರೆ ನಮ್ಮ ಇಂಜಿನಿಯರ್ ಗಳ ಶಕ್ತಿ, ಸಾಮರ್ಥದ ಬಗ್ಗೆ ಬಹುದೊಡ್ಡ ಸಲಾಂ ಹೇಳಲೇಬೇಕು. ಮೊಣ್ಣಂಗೇರಿಯ ಅಭಿವೃದ್ಧಿಗೆ ಅಲ್ಲಿನ ಪಂಚಾಯತ್ ಕೂಡಾ ಅನುದಾನದ ವ್ಯವಸ್ಥೆ ಮಾಡಿತು, ವಿವಿಧ ಸಹಕಾರಗಳು ದೊರೆತವು. ಹೀಗಾಗಿ ಇದೆಲ್ಲಾ ಸಾಧ್ಯವಾಯಿತು.

ಮೊಣ್ಣಂಗೇರಿಯಲ್ಲಿ ಕಾಂಕ್ರೀಟ್ ರಸ್ತೆ

 

ವರ್ಷದೊಳಗೆ ಅಲ್ಲ, ತಿಂಗಳೊಳಗೆ ಸಂಪರ್ಕ ವ್ಯವಸ್ಥೆ ಮಾಡಿಸಿದ ಇಂಜಿನಿಯರ್ ಗಳನ್ನು, ಅಧಿಕಾರಿಗಳನ್ನು  ಮೊಣ್ಣಂಗೇರಿ ಜನ  ನೆನಪಿಸಿಕೊಂಡರೆ ಸುಳ್ಯ – ಮಡಿಕೇರಿ ರಸ್ತೆ ದುರಸ್ತಿ ಮಾಡಿಸಿ ತಿಂಗಳೊಳಗೆ ಸಂಪರ್ಕ ಮಾಡಿದ್ದನ್ನು  ಸಾರ್ವಜನಿಕರು ನೆನಪಿಸಿಕೊಳ್ಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror