ಜಲಪ್ರಳಯದಿಂದ ನಾಶವಾದ ಕೃಷಿಗೆ ಜೀವ ತುಂಬುವುದು ಹೇಗೆ ?

May 14, 2019
9:00 AM

ಸಂಪಾಜೆ : ಒಂದು ಕಡೆ ಜಲಪ್ರಳಯದಿಂದ ಮನೆ , ಜೀವ ನಾಶ. ಇನ್ನೊಂದು ಕಡೆ ಸಂಪೂರ್ಣ ಕೃಷಿ  ನಾಶ. ಈ ಸಂದಿಗ್ಧ ಸ್ಥಿತಿಗೆ ವರ್ಷ ಹತ್ತಿರವಾಯಿತು.  ಇಂದಿಗೂ ಇಲ್ಲಿ  ಕೃಷಿ ವ್ಯವಸ್ಥೆ ಸುಧಾರಣೆ ಆಗಿಲ್ಲ. 32 ಕ್ವಿಂಟಾಲ್ ಅಡಿಕೆ  ಬರುತ್ತಿದ್ದ ವ್ಯಕ್ತಿಗೆ ಈಗ 2 ಕ್ವಿಂಟಾಲ್ ಅಡಿಕೆ..!.  ಹೀಗಾಗಿ ಇಲ್ಲಿ ಬದುಕು ಮಾತ್ರವಲ್ಲ ಕೃಷಿ ಬದುಕೂ ಈಗ ಕನಸಾಗಿದೆ ಎನ್ನುತ್ತಾರೆ ಜನ. ಈ ಬಾರಿಯ ಮಳೆ ಹೇಗೋ ಎಂಬ ಭಯ ಈಗ ಇವರನ್ನು ಕಾಡುತ್ತಿದೆ.

Advertisement
Advertisement

Advertisement

 

Advertisement

ಕೃಷಿ ಆದಾಯವನ್ನೇ ನಂಬಿ ಬದುಕುತ್ತಿದ್ದ ಸಣ್ಣ ಸಣ್ಣ ಕುಟುಂಬಗಳು ಅದು. ಅದೇ ಆದಾಯವೇ ಅವರ ಬದುಕಿಗೆ ಆಧಾರವಾಗಿತ್ತು.  ಕೃಷಿಯನ್ನೇ ನಂಬಿ ಬದುಕು ಕಟ್ಟಿ ಕೊಂಡವರು ಜೋಡುಪಾಲ ಮತ್ತು ಎರಡನೇ ಮೊಣ್ಣಂಗೇರಿ ಭಾಗದ ಜನರು. ಕೃಷಿ ಅಂದರೆ  ಸ್ವಾವಲಂಬನೆಯ ಬದುಕು ಅವರದು. ಕಳೆದ ಬಾರಿ ಉಂಟಾದ ಜಲಪ್ರಳಯ ಮತ್ತು ಭೂಕುಸಿತ ಇವರ ಕೃಷಿ ಬದುಕನ್ನು ಆಪೋಷನ ತೆಗೆದುಕೊಂಡಿದೆ,  ಅದರ ಜೊತೆಗೆ ಸ್ವಾವಲಂಬನೆಯ ಬದುಕನ್ನೂ ಕುಗ್ಗಿಸಿದೆ. ಇದನ್ನು ಎರಡನೇ ಮೊಣ್ಣಂಗೇರಿಯ ಜಯರಾಮ ಹೀಗೆ ಹೇಳುತ್ತಾರೆ…

Advertisement

ಬೆಟ್ಟಗಳು ಸಂಪೂರ್ಣ ಕುಸಿದು ಬಂದ ಕಾರಣ ಹೆಕ್ಟೇರ್ ಗಟ್ಟಲೆ ಅಡಕೆ, ಕಾಫಿ ತೋಟಗಳು ನಾಶವಾಗಿದೆ. ತಿಂಗಳುಗಟ್ಟಲೆ ಕೆಸರು ನೀರು, ಮಣ್ಣು ತುಂಬಿ ತೋಟಗಳು ನಾಮಾಶೇಷವಾಗಿದೆ. ವಿಪರೀತ ಮಳೆಯೋ, ಪ್ರಕೃತಿಯ ವೈಪರೀತ್ಯವೋ ಎಂಬಂತೆ ಇದ್ದ ಅಡಿಕೆ ಮರಗಳಲ್ಲಿ ಅಡಿಕೆ ಇಲ್ಲ. ಹಿಂಗಾರ ಅರಳಿದರೂ ಅಡಿಕೆ ಉಳಿಯಲಿಲ್ಲ. ಅಡಿಕೆ ಮರಗಳು ಸಾಯಲು ಸಿದ್ಧವಾಗಿದೆ. ಅನ್ನದ ಬಟ್ಟಲು ತುಂಬುತ್ತಿದ್ದ ಭತ್ತ ಬೇಸಾಯವೂ ಇಲ್ಲದಂತಾಗಿದೆ. ಇಡೀ ವರ್ಷ ಊಟ ಮಾಡಲು ಸಾಕಾಗುತ್ತಿದ್ದ ಭತ್ತ ಕೃಷಿ ಮಳೆಗೆ ಕೊಚ್ಚಿಹೋದ ಕಾರಣ ಅಕ್ಕಿಯಲ್ಲಿ ಸ್ವಾವಲಂಬನೆ ಪಡೆದಿದ್ದ ಕುಟುಂಬಗಳು ಇಂದು ಪೇಟೆಯಿಂದ ಅಕ್ಕಿ ತರುವ ಸ್ಥಿತಿ ಉಂಟಾಗಿದೆ. ಇನ್ನು 32 ಕ್ವಿಂಟಾಲ್ ಅಡಿಕೆ ದೊರೆಯುತ್ತಿದ್ದ ಎರಡನೇ ಮೊಣ್ಣಂಗೇರಿಯ ಜಯರಾಮ ಅವರಿಗೆ ಈ ವರ್ಷ ಸಿಕ್ಕಿದ್ದು ಕೇವಲ 2 ಕ್ವಿಂಟಾಲ್ ಅಡಕೆ ಮಾತ್ರ. ಕುಸಿದ ಗುಡ್ಡದೊಂದಿಗೆ ಕೊಚ್ಚಿ ಹೋದ ಇವರ ತೋಟ ಇದ್ದಲ್ಲಿ ಈಗ ಕಾಣುವುದು ಪಾತಾಳದಂತೆ ಕಾಣುವ ಪ್ರಪಾತಗಳು ಮಾತ್ರ. ಮಳೆಗಾಲದಲ್ಲಿ ಜಲಸಾಗರವೇ ಹರಿದರೂ ಬೇಸಿಗೆಯಲ್ಲಿ ಈ ಪ್ರದೇಶದಲ್ಲಿ ಜಲಕ್ಷಾಮ ಎದುರಾಗಿತ್ತು ಎಂಬುದು ಇನ್ನೊಂದು ವಿಚಿತ್ರ.

ಹಿಂದೆಲ್ಲಾ ತೋಟದ ಪಕ್ಕವೇ ಹರಿಯುತ್ತಿದ್ದ ನೀರು ಈಗ ಕಾಣದಾಗಿದೆ. ಹಿಂದೆ ತೋಟ ಕೆಳಭಾಗದಲ್ಲಿತ್ತು ನೀರು ಮೇಲೆ ಹರಿಯುತ್ತಿತ್ತು, ಇಂದು ನೀರು ಕೆಳಭಾಗದಲ್ಲಿ ಹರಿದರೆ ತೋಟ ಮೇಲ್ಭಾಗಕ್ಕೆ ಬಂದಿದೆ. ಅಷ್ಟು ಪ್ರಪಾತ ಸೃಷ್ಠಿಯಾಗಿದೆ. ಹೀಗಾಗಿ ಆಸುಪಾಸು ಯಥೇಚ್ಛವಾಗಿದ್ದ ನೀರು ಈಗ ಕಾಣದಾಗಿದೆ. ಮನೆಗೆ ಸ್ವಾವಲಂಬನೆಯ ವಿದ್ಯುತ್ ಇದ್ದ ಜಯರಾಮ ಅವರಿಗೆ ಈಗ ಒಂದು ವರ್ಷದಿಂದ ವಿದ್ಯುತ್ ಇಲ್ಲವಾಗಿದೆ. ಈ ಎಲ್ಲಗಳ ನಡುವೆಯೂ ಅವರು ಬದುಕು ಸಾಗಿಸುತ್ತಿದ್ದಾರೆ. ಇದ್ದುದರಲ್ಲೇ ಖುಷಿ ಪಡುತ್ತಾರೆ. ಕೃಷಿ ಅಭಿವೃದ್ಧಿಗೆ ಇನ್ನೂ ಹೊರಟಿಲ್ಲ. ತರಕಾರಿಯಂತಹ ಕೃಷಿ ಮಾಡಿದರೆ ಬಳ್ಳಿಗಳು ಯಥೇಚ್ಛ ಬರುತ್ತದೆ ಕಾಯಿಕಟ್ಟುವುದು  ದೂರವಾಗುತ್ತದೆ. ಬೆಂಡೆಯಂತಹ ತರಕಾರಿ ಆಗುತ್ತದೆ.

Advertisement

 

Advertisement

 

ಜಲಪ್ರಳಯವು ಜೋಡುಪಾಲ, ಮೊಣ್ಣಂಗೇರಿ ಭಾಗದ ಜನರ ಬದುಕು, ಮನೆ ಮಾತ್ರವಲ್ಲ ಕೃಷಿ ಭೂಮಿಯನ್ನು ನಾಶವಾಗುವಂತೆ ಮಾಡಿದೆ. ಮತ್ತೆ ಕೃಷಿ ಮಾಡಲು ಈ ಮಳೆಗಾಲ ಕಳೆಯಲು ಕಾಯುತ್ತಿದ್ದಾರೆ. ತರಕಾರಿಯಂತಹ ಕೃಷಿ ಮಾಡಿ ಸ್ವಾವಲಂಬನೆಯ ಹಾದಿಯಲ್ಲಿದ್ದಾರೆ. ಈ ಬಾರಿಯ ಮಳೆಗಾಲ ಹೇಗೆ ಎಂಬ ಭಯ ಇಲ್ಲಿಯವರನ್ನು ಕಾಡುತ್ತಿದೆ. ಮೊನ್ನೆ ಸುರಿದ ಮಳೆಗೆ ಭಯಗೊಂಡಿದ್ದಾರೆ, ಇದನ್ನು ಮೊಣ್ಣಂಗೇರಿಯ ಜಯರಾಮ ಹೀಗೆ ಹೇಳುತ್ತಾರೆ,

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ
ಬಿಸಿಲಿನ ಬೇಗೆ | ಬೆಂಗಳೂರಿನಲ್ಲಿ ಗರಿಷ್ಟ ತಾಪಮಾನ | ಕರಾವಳಿಯಲ್ಲೂ ತಲಪಿತು 39 ಡಿಗ್ರಿ…! | ಮಳೆಯಾಗಿಲ್ಲ ಇನ್ನೂ….|
April 7, 2024
10:39 PM
by: ದ ರೂರಲ್ ಮಿರರ್.ಕಾಂ
ಚುನಾವಣೆಯ ಹೆಸರಿನಲ್ಲಿ ಕೃಷಿಕರ ಕೋವಿ ಠೇವಣಾತಿ | ವಿಶೇಷ ಸಭೆ ಸೇರಿ ವಿನಾಯಿತಿ ನೀಡಿದ ಸ್ಕ್ರೀನಿಂಗ್‌ ಕಮಿಟಿ…! |
April 3, 2024
7:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror