ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು : ವಿಶೇಷ ಉಪನ್ಯಾಸ

November 6, 2019
10:36 PM

ಸುಳ್ಯ: ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಹೃದಯವಿಲ್ಲದ ಹತ್ಯಾಕಾಂಡಕ್ಕೆ ಸಾಕ್ಷಿಯಾಯಿತು. ಆಂಗ್ಲರ ಕಠಿಣ ಮತ್ತು ಕ್ರೂರವಾದ ಧೋರಣೆಗಳು ಭಾರತೀಯ ದೇಶ ಭಕ್ತರಲ್ಲಿ ಸ್ವಾತಂತ್ರದ ಕೆಚ್ಚನ್ನು , ಶ್ರದ್ಧೆಯನ್ನು ಹೆಚ್ಚಿಸಿತು ಎಂದು ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು.

Advertisement
Advertisement

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯಇಲ್ಲಿನ ಮಾನವಿಕ ಸಂಘದಿಂದ ಏರ್ಪಡಿಸಲಾದ ” ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ನಮಗೆ ಸ್ವಾತಂತ್ಯ ದೊರಕಿದುದರ ಹಿಂದೆ ಅದೆಷ್ಟೋ ಜನರ ಕಣ್ಣೀರ ಕಥೆಯಿದೆ , ಸ್ವಾತಂತ್ರ್ಯದ ಸಿಹಿಯ ಹಿಂದಿನ ಕಹಿಯನ್ನು ತಿಳಿದುಕೊಳ್ಳಬೇಕು ಮತ್ತು ಸ್ವಾತಂತ್ರ್ಯದ ಸದುಪಯೋಗ ಮುಖ್ಯ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ.ಪೂ‌.ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯರು ಮಾತನಾಡಿ ಇತಿಹಾಸವನ್ನು ಏಕಮುಖವಾಗಿ ನೋಡುವುದಲ್ಲ , ಈ ನೆಲದ ಅಂತರಾಳದ ನೋವನ್ನು ತಿಳಿದುಕೊಳ್ಳಬೇಕು , ಇತಿಹಾಸದ ದುರಂತ ಮನುಕುಲಕ್ಕೆ ಪಾಠವಾಗಬೇಕು ಮತ್ತು ಹೊರಜಗತ್ತಿನ ಸಂಘರ್ಷಗಳು ಬಲಿಷ್ಠವಾಗಿ ಬೆಳೆಯಲು ಸಹಾಯವಾಗಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಮಾನವಿಕ ಸಂಘದ ನಿರ್ದೇಶಕಿ ಉಪನ್ಯಾಸಕಿ ರೇಷ್ಮಾ, ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು.

ಇತಿಹಾಸ ಉಪನ್ಯಾಸಕರಾದ ಹರೀಶ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಲಕ್ಷ್ಮಣ್ ಏನೆಕಲ್ ಅವರು ವಂದಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಅತಿಥಿಗಳೊಡನೆ ಸಂವಾದ ನಡೆಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group