ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಆರು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಕೋಲಾರದ ಆರ್ಎನ್ ಜಾಲಪ್ಪ ಆಸ್ಪತ್ರೆ, ದೊಡ್ಡಬಳ್ಳಾಪುರದ ಸೋಮೇಶ್ವರ ನಗರದಲ್ಲಿರುವ ಹಾಗೂ ಮಗನ ಮನೆಯ ಮೇಲೂ ಐಟಿ ದಾಳಿ ನಡೆದಿದೆ.
ರಾಜಕೀಯ ದುರುದ್ದೇಶದಿಂದಲೇ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿಗಳು ನಡೆಯುತ್ತಿವೆ, ಬಿಜೆಪಿ ನಾಯಕರ ಮೇಲೆ ಐಟಿ ದಾಳಿ ಏಕೆ ಮಾಡಿಲ್ಲ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಐಟಿ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಾ.ಪರಮೇಶ್ವರ ಅವರು, ನಮ್ಮ ಸಂಸ್ಥೆಗಳಲ್ಲಿ ಏನಾದರೂ ತಪ್ಪುಗಳಿದ್ದರೆ ತಿಳಿಸಲಿ, ಕಾನೂನನ್ನು ಮೀರಿ ಏನಾದರೂ ವ್ಯವಹಾರ ನಡೆಸಿದ್ದಲ್ಲಿ ಅವರೇ ಬಹಿರಂಗಪಡಿಸುತ್ತಾರೆ ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

