ಜುಲೈ 30, 31 – ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

July 29, 2020
8:15 PM

ಮಂಗಳೂರು : ಜುಲೈ 30 ಹಾಗೂ 31 ರವರೆಗೆ ದ.ಕ. ಜಿಲ್ಲೆಯ ಮಂಗಳೂರು ಕಮೀಷನರೇಟ್ ಘಟಕದ ವ್ಯಾಪ್ತಿಯ ಪರೀಕ್ಷಾ ಕೇಂದ್ರ ಸಿಇಟಿ 2020 – ಸಾಮಾನ್ಯ ಪ್ರವೇಶ ಪರೀಕ್ಷೆಗಳು ಹಾಗೂ ಆಗಸ್ಟ್ 1 ರಂದು ಹೊರನಾಡು ಮತ್ತು ಗಡಿನಾಡು ಆಭ್ಯರ್ಥಿಗಳಿಗೆ ಸಿಇಟಿ 2020ರ ಕನ್ನಡ ಭಾಷಾ ಪರೀಕ್ಷಾ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. 1973 ಕಾಯ್ದೆಯ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಜ್ಯಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶಿಸಿರುತ್ತಾರೆ.

ನಿಷೇಧಾಜ್ಞೆ ಜಾರಿಯಾದ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಆಭ್ಯರ್ಥಿಗಳ ಹೊರತು ಪಡಿಸಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಮತ್ತು ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಮೊಬೈಲ್ ದೂರವಾಣಿ ಹಾಗೂ ಪೇಜರ್ ಇತ್ಯಾದಿ ಇಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ
ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror