ಜೂ.15 ರಿಂದ ಪುತ್ತೂರಿನಲ್ಲಿ ಹಲಸು ಸಾರ ಮೇಳ : ಮಳಿಗೆಗಳಿಗೆ ಅವಕಾಶ

May 29, 2019
6:06 PM

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜೂ.15 ಹಾಗೂ 16 ರಂದು ಹಲಸು ಸಾರ ಮೇಳ ನಡೆಯಲಿದೆ. ಹೀಗಾಗಿ ಹಲಸಿನ ವಿವಿಧ ಮಳಿಗೆಗಳಿಗೆ ಅವಕಾಶ ನೀಡಲಾಗಿದ್ದು ಆಸಕ್ತರು ಸಂಪರ್ಕಿಸಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಲಸು ಸ್ನೇಹ ಸಂಗಮ ವತಿಯಿಂದ ನಡೆಯುವ ಹಲಸು ಸಾರ ಮೇಳದಲ್ಲಿ ಹಲಸಿನ ಉತ್ಪನ್ನಗಳಿಗೆ ಮಾತ್ರವೇ ಆದ್ಯತೆ ನೀಡಲಾಗುತ್ತಿದೆ. ಮಳಿಗೆದಾರರು ರುಚಿವರ್ಧಕ, ಕೃತಕ ಬಣ್ಣ ಗಳು, ಕಲಬೆರಕೆ ಬಳಸಿದ ಖಾದ್ಯಗಳಿಗೆ ಅವಕಾಶ ಇಲ್ಲ ಎಂಬುದನ್ನು ಗಮನಿಸಬೇಕಾಗಿದೆ. ಉತ್ಪನ್ನಗಳ ಗುಣಮಟ್ಟದ ಕಡೆಗೆ ವಿಶೇಷ ಗಮನ ನೀಡಬೇಕಾಗುತ್ತದೆ. ಮೊದಲು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಶುಚಿ-ರುಚಿಗಳನ್ನು ಕಾಪಾಡುವ ಹೊಣೆ ಮಳಿಗೆದಾರರದ್ದಾಗಿರುತ್ತದೆ. ಆಸಕ್ತರು 9741810502 ಸಂಪರ್ಕ ಮಾಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror