ಜೂ.7 : ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಗೊಂದಲ ನಿವಾರಣೆಗೆ ಪೇಜಾವರ ಶ್ರೀ ಆಗಮನ

June 6, 2019
10:37 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸರ್ಪಸಂಸ್ಕಾರ ಸೇವೆಯ ಸಲುವಾಗಿ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಗೊಂದಲ ನಡೆಯುತ್ತಿದ್ದು ಇದನ್ನು ಸರಿಪಡಿಸಲು ಪೇಜಾವರ ಶ್ರೀಗಳು ಜೂ.7 ರಂದು ಸಂಜೆ ಆಗಮಿಸಲಿದ್ದಾರೆ. ಪೇಜಾವರ ಶ್ರೀಗಳು  ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಲಿದ್ದಾರೆ.

ಇದೇ ಸಂದರ್ಭ  ಬೆಳಗ್ಗೆ ಸುಬ್ರಹ್ಮಣ್ಯದ ಉತ್ತರಾಧಿಮಠದಲ್ಲಿ ಪೇಜಾವರ ಶ್ರೀ ಗಳು ಆಗಮಿಸುವ ಬಗ್ಗೆ ಪೂವ೯ಭಾವಿ ಸಭೆ ನಡೆಯಲಿದೆ.ಕ್ಷೇತ್ರದ ಶಾಂತಿ , ಸುವ್ಯವಸ್ಥೆ ಪಾವಿತ್ರ್ಯತೆಯನ್ನು ಕಾಪಾಡಲು ಭಕ್ತರು ಆಗಮಿಸಿ  ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ಗೊಂದಲಗಳ ಪರಿಹಾರದ ಬಗ್ಗೆ ಸೂಕ್ತ ಸಲಹೆ ನೀಡುವಂತೆ ದೇವಸ್ಥಾನದ ಹಿತರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಮಹೇಶ್  ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.

ಇದೇ ಸಂಬಂಧವಾಗಿ ಜೂ.6 ರ ಗುರುವಾರ ದೇವಸ್ಥಾನದ ಹಿತರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಮಹೇಶ್  ಕುಮಾರ್ ಕರಿಕ್ಕಳ ಹಾಗೂ ಭಕ್ತ ಗುರುಪ್ರಸಾದ್ ಪಂಜ ಉಡುಪಿಗೆ ಭೇಟಿ ನೀಡಿ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಜೊತೆ ಮಾತುಕತೆ ನಡೆಸಿದರು. ದೇವಸ್ಥಾನದ ಇತಿಹಾಸ ಹಾಗೂ ನಡೆಯುವ ಸೇವೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಇದೇ ಸಂದರ್ಭ ವಿಶ್ವ ಹಿಂದೂ ಪರಿಷದ್ ಮುಖಂಡ ಪ್ರೊ.ಎಂ.ಬಿ.ಪುರಾಣಿಕ್ ಅವರು ಮಠದ ಪರವಾಗಿ ವಿವರ ನೀಡಿದರು. ಇದೇ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡುಬಂದ ಗಣಪತಿ ಗುಡಿಯ ಬಗ್ಗೆಯೂ, ಮರುನಿರ್ಮಾಣವಾಗುವ ಬಗ್ಗೆಯೂ ಪೇಜಾವರ ಶ್ರೀಗಳ ಗಮನಕ್ಕೆ ತರಲಾಯಿತು ಎಂದು ಮೂಲಗಳು ತಿಳಿಸಿವೆ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!
March 18, 2026
1:40 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror