ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

August 23, 2019
1:00 PM

ಬೆಳ್ಳಾರೆ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇಂಟರ್ಯಾಕ್ಟ್ ದಾರಿದೀಪವಾಗಿದ್ದು, ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆಗಳನ್ನು ಸೃಷ್ಠಿಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವೇದಿಕೆಯಾಗಿದೆ ಎಂದು ಇಂಟರ್ಯಾಕ್ಟ್ ವಲಯ 15ರ ಝೋನಲ್ ಕೋಆರ್ಡಿನೇಟರ್ ಜಿತೇಂದ್ರ ಎನ್.ಎ ಹೇಳಿದರು.

ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಪ್ರಾಯೋಜಿತ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ಇಂಟರ್ಯಾಕ್ಟ್ ಕ್ಲಬ್‍ನ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದ ಅವರು ರೋಟರಿ ಧ್ಯೇಯಗಳನ್ನು ವಿದ್ಯಾರ್ಥಿಗಳು ಎಳವೆಯಲ್ಲೇ ಅರ್ಥ ಮಾಡಿಕೊಂಡರೆ ಅವರಲ್ಲಿ ನಾಯಕತ್ವದ, ವ್ಯಕ್ತಿತ್ವ ವಿಕಸನದ ಸಂಯಮದಂತಹ ಗುಣಗಳು ಬೆಳೆಯಲು ಸಾಧ್ಯ ಎಂದರು.

ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್‍ನ ನಿರ್ಗಮಿತ ಅಧ್ಯಕ್ಷೆ ಶ್ರೀನಿಧಿ ನೂತನ ಅಧ್ಯಕ್ಷೆ ಯಶ್ಮಿತಾ ಅವರಿಗೆ ಮತ್ತು ನಿರ್ಗಮಿತ ಕಾರ್ಯದರ್ಶಿ ಸಾಯಿಶ್ವೇತ ನೂತನ ಕಾರ್ಯದರ್ಶಿ ಮೇಘಶ್ರೀ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಸದಸ್ಯರಾಗಿ ಸೇರ್ಪಡೆಯಾದ 30 ಮಂದಿ ವಿದ್ಯಾರ್ಥಿಗಳನ್ನು ಪದಗ್ರಹಣ ಅಧಿಕಾರಿ ಹೂ ನೀಡಿ ಸ್ವಾಗತಿಸಿದರು.

ವಿದ್ಯಾಥಿಗಳಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಹಿತಾಯು ಕ್ಲಿನಿಕ್‍ನ ವೈದ್ಯ ಡಾ.ಯಸ್ ಭಾರದ್ವಾಜ್ ಮಾಹಿತಿ ನೀಡಿದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಬಿ ನರಸಿಂಹ ಜೋಶಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಇಂಟರ್ಯಾಕ್ಟ್ ಚೆಯರ್ಮೆನ್ ಶಶಿಧರ್, ಇಂಟರ್ಯಾಕ್ಟ್ ಶಿಕ್ಷಕ ಸಂಯೋಜಕ ಗಣೇಶ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ಪಿ.ಎಸ್ ಉಪಸ್ಥಿತರಿದ್ದರು.

ಪೂರ್ವಾಧ್ಯಕ್ಷ ಸುಬ್ರಹ್ಮಣ್ಯ ಜೋಶಿ ಪ್ರಸ್ತಾವಿಸಿ ಸ್ವಾಗತಿಸಿದರು. ಮೇಘಶ್ರೀ ವಂದಿಸಿದರು.ವಿದ್ಯಾರ್ಥಿ ಶಿಕ್ಷಕಿ ಆಶಾ ಕಾರ್ಯಕ್ರಮ ನಿರೂಪಿಸಿದರು

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror