ಜ್ವರ , ಕೆಮ್ಮು, ಉಸಿರಾಟದ ತೊಂದರೆ – ಫೀವರ್ ಕ್ಲಿನಿಕ್ ಸಂಪರ್ಕಿಸಲು ಸೂಚನೆ

April 21, 2020
9:17 PM

ಮಂಗಳೂರು :  ಸಾರ್ವಜನಿಕರು ತಮಗೆ ಜ್ವರ, ಕೆಮ್ಮ, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫೀವರ್ ಕ್ಲಿನಿಕ್ ಸಂಪರ್ಕಿಸಲು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement

ಕೋವಿಡ್ ಪರೀಕ್ಷೆಗೊಳಪಡಿಸುವ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೋಗ್ಯ ಸಮಸ್ಯೆಗಳ ಮಾಹಿತಿಯನ್ನು  ಅಧಿಕಾರಿಗಳೊಂದಿಗೆ  ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ.

ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ನೀಡಲು ಈಗಾಗಲೇ ಆದೇಶಿಸಲಾಗಿದೆ. ಅದರಂತೆ ಎಲ್ಲಾ ಖಾಸಗಿ ವೈದ್ಯಾಧಿಕಾರಿಗಳು ಸಹ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ.  ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರ ಮಾಹಿತಿಯನ್ನು ನೀಡುವುದು ಸಾರ್ವಜನಿಕರ ಆದ್ಯ ಕರ್ತವ್ಯವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ತಿಳಿಸಲಾಗಿದೆ.
ಈ ರೀತಿ ತ್ವರಿತವಾಗಿ ಮಾಹಿತಿಯನ್ನು ನೀಡುವುದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆತು ಗುಣಪಡಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group