ಟಿಪ್ಪು ಜಯಂತಿ ರದ್ದು : ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರದ ನಿರ್ಣಯಕ್ಕೆ ಸ್ವಾಗತ

August 1, 2019
12:00 PM
ಸುಳ್ಯ: ಟಿಪ್ಪು ಜಯಂತಿಯನ್ನು ರದ್ದು ಮಾಡಿದ ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರದ ನಿರ್ಣಯ ಅತ್ಯಂತ ಸ್ವಾಗತಾರ್ಹವಾಗಿದೆ ಎಂದು  ಹಿಂದೂ ಜನಜಾಗೃತಿ ಸಮಿತಿ  ರಾಜ್ಯ ವಕ್ತಾರ ಮೋಹನ ಗೌಡ ಹೇಳಿದ್ದಾರೆ.
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾವು ಕೇವಲ ಮುಸ್ಲಿಂರನ್ನು ಒಲೈಕೆ ಮಾಡುವ ಉದ್ದೇಶದಿಂದ ಕನ್ನಡ ವಿರೋಧಿ, ಅತ್ಯಂತ ಕ್ರೂರಿ, ಸಾವಿರಾರು ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡಿದ, ಲಕ್ಷಾಂತರ ಹಿಂದೂಗಳ ಹತ್ಯೆ ಮಾಡಿದ ಟಿಪ್ಪು ಜಯಂತಿಯನ್ನು ಸರಕಾರದ ಸ್ಥರದಲ್ಲಿ ಆಚರಣೆ ಮಾಡುವ ನಿರ್ಣಯವನ್ನು ತೆಗೆದುಕೊಂಡಿತ್ತು. ಇಂದು ಈ ನಿರ್ಣಯವನ್ನು ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರವು ಟಿಪ್ಪು ಜಯಂತಿ ಆಚರಣೆಯನ್ನು ರದ್ಧು ಮಾಡಿದೆ. ಇದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ. ಹಿಂದೂ ಜನಜಾಗೃತಿ ಸಮಿತಿಯು  ಟಿಪ್ಪು ಜಯಂತಿ ಆಚರಣೆಯ ವಿರುದ್ಧ ರಾಜ್ಯವ್ಯಾಪಿ ಆಂದೋಲನವನ್ನು ಇತರ ಹಿಂದೂ ಸಂಘಟನೆಗಳ ಜೊತೆಗೆ ಸೇರಿ ಮಾಡಿತ್ತು.  ಭಾಜಪ ಸರಕಾರ ಟಿಪ್ಪು ಜಯಂತಿಯ ರದ್ದು ನಿರ್ಣಯವನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror