ಸುಳ್ಯ: ಗುತ್ತಿಗಾರು ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿರುವ ಡಾ.ವೆಂಕಟಾಚಲಪತಿ ಅವರಿಗೆ ಅರಣ್ಯ ಇಲಾಖೆ ನೀಡುವ ‘ಅರಣ್ಯ ಮಿತ್ರ‘ ಪ್ರಶಸ್ತಿ ಲಭಿಸಿದೆ. ವನ್ಯಜೀವಿಗಳ ರಕ್ಷಣೆಗೆ ಇವರು ನೀಡಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಅರಣ್ಯ ಇಲಾಖೆ ವತಿಯಿಂದ ಮಂಗಳೂರಿನಲ್ಲಿ ನಡೆದ ವೃಕ್ಷೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel