ಡಿ.19 ರಿಂದ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ಜಾತ್ರೆ : ಚಪ್ಪರ ಮುಹೂರ್ತ

November 24, 2019
1:43 PM

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ‌ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಭಾನುವಾರ ಚಪ್ಪರ ಮುಹೂರ್ತ ನಡೆಯಿತು. ಊರಿನ ಹಿರಿಯರಾದ  ಶೀನಪ್ಪ ಗೌಡ ಎರುಂಬಿಲ ಚಪ್ಪರ ಮುಹೂರ್ತ ನೆರವೇರಿಸಿದರು. ಬಳಿಕ ಧಾರ್ಮಿಕ ಉತ್ಸವ ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು. ಜಾತ್ರಾ ಉತ್ಸವದ ಸಿದ್ಧತೆಗಳು ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನದ ಬಗ್ಗೆ ಚರ್ಚೆ ನಡೆಸಲಾಯಿತು.

Advertisement
Advertisement

 

Advertisement

 

ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ , ಕೋಶಾಧಿಕಾರಿ ಮುರಳಿ ಕಾಮತ್, ಸಂಘಟನಾ ಕಾರ್ಯದರ್ಶಿ ವಿಶ್ವನಾಥ ರೈ ಅರ್ಗುಡಿ ಸೇರಿದಂತೆ ವಿವಿಧ ಸಮಿತಿ ಸಂಚಾಲಕರುಗಳು,  ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Advertisement

ನ.26 ರಂದು ಮಂಗಳವಾರ ರಾತ್ರಿ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಕಾರ್ತಿಕ ದೀಪೋತ್ಸವ ನಡೆಯಲಿದೆ ಎಂದು ಇದೇ ವೇಳೆ ಭಕ್ತಾದಿಗಳಿಗೆ ಮಾಹಿತಿ ನೀಡಲಾಯಿತು.

 

 ಡಿ.12 ರಂದು ಗೊನೆ ಮುಹೂರ್ತ , ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಹಾಗೂ ಸಂಜೆ ದೈವಗಳ ನೇಮ ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group