ಡಿ.2: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

November 26, 2019
6:54 PM

ಸವಣೂರು : ಪುತ್ತೂರು ತಾಲೂಕಿನಲ್ಲಿ ವಲ್ಮೀಕ (ಹುತ್ತ)ಕ್ಕೆ ಪೂಜೆ ಸಲ್ಲಿಸುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.1 ಮತ್ತು ಡಿ.2 ರಂದು ನಡೆಯಲಿದೆ.

ಡಿ.1ರ ರಾತ್ರಿ 7 ಕ್ಕೆ ವಿಶೇಷ ಕಾರ್ತಿಕ ಪೂಜೆ ನಡೆಯಲಿದೆ. ಡಿ.2ರಂದು ಬೆಳಿಗ್ಗೆ ಗಣಪತಿ ಹೋಮ, ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ ಸೇವೆ , ಮದ್ಯಾಹ್ನ ಚಂಪಾಷಷ್ಠಿ ಮಹೋತ್ಸವ, ಹೂವಿನ ಪೂಜೆ, ವಿಶೇಷ ಪೂಜೆ, ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ವಿಶೇಷತೆ: ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ. ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ, ಉದ್ಯೋಗ, ಇಷ್ಟಾರ್ಥ ಸಿದ್ದಿಗೆ, ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ, ಹೂವಿನ ಪೂಜೆ, ರಾಹು ಜಪ, ಆಶ್ಲೇಷ ಬಲಿ, ಕುಂಕುಮಾರ್ಚನೆ, ಕಾರ್ತಿಕ ಪೂಜೆ, ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ, ಸರ್ಪ ಸಂಸ್ಕಾರ, ನವಗ್ರಹ ಶಾಂತಿ ಹೋಮ ನಡೆಯುತ್ತದೆ. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror