ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

October 15, 2019
3:20 PM

ಬೆಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ.  ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿಂದೆ ವಿಧಿಸಿದ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ ಪರ ವಕೀಲರು ಜಾಮೀನು ನೀಡುವಂತೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯ, ಇನ್ನೂ ವಿಚಾರಣೆ ಪ್ರಾಥಮಿಕ ಹಂತದಲ್ಲೇ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ವಾದ ಮಂಡಿಸಿತು.

ಈ ಹಿನ್ನೆಲೆಯಲ್ಲಿ ನ್ಯಾಯಾಲದ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿದೆ. ಇದರಿಂದಾಗಿ ಸತತ ಮೂರನೇ ಬಾರಿಗೆ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಕಳೆದ ಒಂದೂವರೆ ತಿಂಗಳಿನಿಂದ ಡಿ.ಕೆ.ಶಿವಕುಮಾರ ಬಂಧನದಲ್ಲೇ ಇದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror