ಡಿ ಕೆ ಶಿವಕುಮಾರ್ ಪ್ರಕರಣ : ಜಾರಿನಿರ್ದೇಶನಾಲಯ ಪರ ವಾದ ಮಂಡಿಸಿದವರು ಕೆ ಎಂ ನಟರಾಜ್

September 5, 2019
8:56 AM

ಬೆಂಗಳೂರು: ಅಕ್ರಮ ಹಣ ಪತ್ತೆ ಆರೋಪ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು 9 ದಿನಗಳ ಕಾಲ ಕಸ್ಟಡಿಗೆ ವಹಿಸಲಾಗಿದೆ.

Advertisement
Advertisement

ಅಜಯ್ ಕುಮಾರ್ ಕುಹಾರ್ ನೇತೃತ್ವದ ಏಕಸದಸ್ಯ ಪೀಠ, ಡಿ.ಕೆ.ಶಿವಕುಮಾರ್ ಅವರನ್ನು 9 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ. ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದರೆ ಇಡಿ ಪರ ವಕೀಲ ಕೆ.ಎಂ.ನಟರಾಜ್ ಪ್ರತಿವಾದ ಮಂಡಿಸಿದರು. ಜೊತೆಗೆ ಇಲಾಖೆಯ ಅಧಿಕಾರಿಗಳ ವಶಕ್ಕೆ ಶಿವಕುಮಾರ್ ಅವರನ್ನು ನ್ಯಾಯಾಧೀಶರು ವಹಿಸುವಂತಹ ಖಡಕ್ ಪ್ರತಿವಾದ ಮಂಡಿಸುವಲ್ಲಿ ನಟರಾಜ್ ಯಶ್ವಸಿಯಾಗಿದ್ದಾರೆ.

Advertisement

ನಟರಾಜ್ ಪುತ್ತೂರಿನ ಈಶ್ವರಮಂಗಲದವರು:

ಕೆ.ಎಂ.ನಟರಾಜ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಈಶ್ವರಮಂಗಲದವರು. ವಕೀಲ ವೃತ್ತಿಯಲ್ಲಿ ಕಾರ್ಯ ಆರಂಭಿಸಿದ ಕೆ.ಎಂ.ನಟರಾಜ್ ಇಂದು ಉನ್ನತ ಹುದ್ದೆಯನ್ನು ಅಲಂಕರಿಸುವಲ್ಲಿ ಯಶ್ವಸಿಯಾಗಿದ್ದಾರೆ. 2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದ ಅವಧಿಯಲ್ಲಿ ಉಚ್ಛ ನ್ಯಾಯಾಲಯದ ವಿಶೇಷ ಅಭಿಯೋಜಕರಾಗಿ ಕಾರ್ಯನಿರ್ವಹಿಸಿದ ಕೆ.ಎಂ ನಟರಾಜ್, ದತ್ತ ಪೀಠ, ಚರ್ಚ್‍ಗಳ ಮೇಲಿನ ದಾಳಿ ಸೇರಿದಂತೆ ಹೈ ಟೆನ್ಷನ್ ಪ್ರಕರಣಗಳಲ್ಲಿ ಸರಕಾರದ ಪರ ವಾದ ಮಂಡಿಸಿದ್ದರು.

Advertisement

ಬಳಿಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಎನ್‍ಡಿಎ-1 ರ ಅವಧಿಯಲ್ಲಿ ಅಡಿಷನಲ್ ಸಾಲಿಸಿಟರ್ ಜನರಲ್ ಆಫ್ ಸುಪ್ರೀಕೋರ್ಟ್ ಫಾರ್ ಸೌತ್ ಇಂಡಿಯಾ ಹುದ್ದೆಯನ್ನು ಅಲಂಕರಿಸಿದರು. ಇದರಲ್ಲಿ ಪ್ರಮುಖವಾಗಿ ದಕ್ಷಿಣ ಭಾರತದ 6 ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪುದುಚೇರಿ ಹಾಗೂ ಕೇರಳ ರಾಜ್ಯಗಳ ಪ್ರಕರಣಗಳಲ್ಲಿ ಎನ್‍ಡಿಎ-1 ಪರ ನಟರಾಜ್ ವಾದ ಮಂಡಿಸುತ್ತಿದ್ದರು. ಕೆ.ಎಂ.ನಟರಾಜ್‍ರ ಕಾರ್ಯಕ್ಷಮತೆಯನ್ನು ಕಂಡ ಪ್ರಧಾನಿ ನರೇಂದ್ರ ಮೋದಿ, ನಟರಾಜ್‍ರನ್ನು ಎನ್‍ಡಿಎ-2 ರ ಅವಧಿಗೆ ಆಡಿಷನಲ್ ಸಾಲಿಸಿಟರ್ ಜನರಲ್ ಆಫ್ ಸುಪ್ರೀಂಕೋರ್ಟ್ ಫಾರ್ ಇಂಡಿಯಾ ಹುದ್ದೆ ನೀಡಿತ್ತು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು
May 17, 2024
2:55 PM
by: The Rural Mirror ಸುದ್ದಿಜಾಲ
ನಮ್ಮ ದೇಶದ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? | ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ | ಕೇವಲ 3.02ಕೋಟಿ ಚರಾಸ್ತಿ
May 15, 2024
11:09 PM
by: The Rural Mirror ಸುದ್ದಿಜಾಲ
ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ | 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ
May 15, 2024
10:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror