ಡಿ.ಕೆ.ಶಿ​ವಕುಮಾರ್ ಗೆ ಬಿಗ್ ರಿಲೀಫ್ ​; ಕೊನೆಗೂ ಜಾಮೀನು ನೀಡಿದ ದೆಹಲಿ ಹೈಕೋರ್ಟ್​

October 23, 2019
3:06 PM

ಹಾಗೇ ಅನುಮತಿ ಇಲ್ಲದೆ ವಿದೇಶಕ್ಕೆ ತೆರಳಬಾರದು, ಪಾಸ್​ಪೋರ್ಟ್​ ಸರಂಡರ್​ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಕಳೆದ 48 ದಿನಗಳಿಂದ ಜೈಲಿನಲ್ಲಿದ್ದ ಡಿಕೆಶಿಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಕೋರ್ಟ್ ಆದೇಶದ ಪ್ರತಿ ಇಂದು ಸಂಜೆ 4 ಗಂಟೆಯೊಳಗೆ ಜೈಲು ತಲುಪಲಿದೆ. ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ತೀರ್ಪು ನೀಡುವ ವೇಳೆ ಕೋರ್ಟ್​ ಹಾಲ್​ನಲ್ಲಿ ಸಂಸದ ಡಿ.ಕೆ.ಸುರೇಶ್​ ಕೂಡಾ ಇದ್ದರು.

Advertisement
Advertisement

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.

ಆರೋಗ್ಯದಲ್ಲಿ ಏರುಪೇರಾದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್ ಬಳಿಕ ತಿಹಾರ್​ ಜೈಲಿನಲ್ಲಿ ಇದ್ದರು. ಈ ಮಧ್ಯೆ ಜಾಮೀನು ಮಂಜೂರು ಮಾಡುವಂತೆ ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್​ ರೋಹಟಗಿ ಈ ಹಿಂದಿನ ಹಲವು ಅಕ್ರಮ ಹಣಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ಉದಾಹರಣೆ ನೀಡಿ, ಇದು ಬಂಧಿಸುವಂತಹ ಕೇಸ್​ ಅಲ್ಲ. ಇ.ಡಿ.ಅಧಿಕಾರಿಗಳು ಎಡವಿದ್ದಾರೆ ಎಂದು ಹೇಳಿದ್ದರು.

ಅಲ್ಲದೆ ಡಿ.ಕೆ.ಶಿವಕುಮಾರ್​ ವಿಚಾರಣೆಗೆ ನುಣುಚಿಕೊಂಡಿಲ್ಲ. ಅವರ ಆರೋಗ್ಯವೂ ಸರಿಯಾಗಿಲ್ಲ. ಈ ಎಲ್ಲ ವಿಚಾರಗಳನ್ನೂ ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ವಾದ ಮಾಡಿದ್ದ ಇ.ಡಿ.ಪರ ವಕೀಲ ನಟರಾಜ್​, ಡಿ.ಕೆ.ಶಿವಕುಮಾರ್​ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಅವರ ಪ್ರಕರಣದಲ್ಲಿ ಅಕ್ರಮ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ವಿಚಾರಣೆಗೆ ಸಹಕರಿಸಿಲ್ಲ. ಇನ್ನೂ ವಿಚಾರಣೆ ಬಾಕಿಯಿದೆ ಎಂದು ಹೇಳಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಸುರೇಶ್​ ಕುಮಾರ್​ ಕೈಟ್​ ತೀರ್ಪು ಕಾಯ್ದಿರಿಸಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ
February 10, 2026
10:34 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror