ಡಿವಿ ಬಳಿಕ ಮತ್ತೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಲಿದ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

August 20, 2019
10:31 PM

ಸುಳ್ಯ: ವಿಧಾನಸಭಾ ಕ್ಷೇತ್ರದ ಮೂರು ಮಂದಿ ಸಂಸದರಾಗಿರುವ ಹೆಮ್ಮೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವೂ ಇದೀಗ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಲಿದು ಬಂದಿದೆ.

Advertisement
Advertisement
Advertisement
Advertisement

ನಿರೀಕ್ಷೆಯಂತೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಡಿ.ವಿ.ಸದಾನಂದ ಗೌಡರ ಬಳಿಕ ಸುಳ್ಯ ವಿಧಾನಸಭಾ ಕ್ಷೇತ್ರದವರು ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಅಲಂಕರಿಸುತ್ತಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಪಾಲ್ತಾಡಿ ಕುಂಜಾಡಿಯವರಾದ ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿದ್ದಾರೆ. ಸಂಸದರಾಗಿ ಕಾರ್ಯನಿರ್ವಹಿಸುವ ಜೊತೆ ಜೊತೆಗೆ ಕೇರಳ ಬಿಜೆಪಿಯ ಸಹಪ್ರಬಾರಿಯಾಗಿ ಪಕ್ಷ ಸಂಘಟನೆಯಲ್ಲಿಯೂ ಸಕ್ರೀಯರಾಗಿದ್ದಾರೆ. ಇದೀಗ ರಾಜ್ಯಾಧ್ಯಕ್ಷರಾಗುವ ಮೂಲಕ ಮಹತ್ತರ ಹುದ್ದೆಯನ್ನು ಅಲಂಕರಿಸಲಿದ್ದಾರೆ.

Advertisement

ಸುಳ್ಯ ವಿಧಾನಸಭಾ ಮೂಲದವರಾದ ನಳಿನ್ ಕುಮಾರ್ ಕಟೀಲ್, ಡಿ.ವಿ.ಸದಾನಂದ ಗೌಡ, ಶೋಭಾ ಕರಂದ್ಲಾಜೆ ಸಂಸದರಾಗಿದ್ದಾರೆ. ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ಸದಾನಂದ ಗೌಡರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಎರಡನೇ ಅವಧಿಗೆ ಕೇಂದ್ರ ಸಚಿವರಾಗಿದ್ದಾರೆ. ಇದೀಗ ಸದಾನಂದ ಗೌಡರ ಬಳಿಕ ನಳಿನ್ ಮೂಲಕ ಜಿಲ್ಲೆಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದು ಬಂದಿದೆ. ಇದು ಜಿಲ್ಲೆಯ ಬಿಜೆಪಿಗೆ ಇನ್ನಷ್ಟು ಹುರುಪು ತುಂಬಲಿದೆ ಎಂದು ವಿಶ್ಲೇಷಿಸಲಾಗುತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ, ಆರು ಬಾರಿ ಶಾಸಕರಾದ ಅಂಗಾರರಿಗೆ ಮಂತ್ರಿ ಗಿರಿ ನೀಡಿಲ್ಲ ಎಂಬ ಅಸಮಾಧಾನ ಹೊಗೆಯಾಡುತ್ತಿರುವುದರ ಮಧ್ಯೆ ಹೈಕಮಾಂಡ್ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷತೆಯ ಪಟ್ಟ ನೀಡಿದೆ ಎಂಬುದು ವಿಶೇಷ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror