ದ.ಕ.-ಉಡುಪಿ : ನಾನ್ ಸಿ ಆರ್ ಝೆಡ್ ಮರಳುಗಾರಿಕೆಗೆ ನಿಯಮ ಸಡೀಲಿಕರಣ ಪ್ರಸ್ತಾಪ

September 14, 2019
12:55 PM

ಮಂಗಳೂರು:ದ.ಕ. ಹಾಗೂ ಉಡುಪಿ ಸೇರಿದಂತೆ ಕರಾವಳಿಯಲ್ಲಿ ತಲೆದೋರಿರುವ ಮರಳು ಸಮಸ್ಯೆ ಪರಿಹಾರಕ್ಕಾಗಿ  ವಿಧಾನ ಸೌಧದಲ್ಲಿ ಸಭೆ ಕರೆಯಲಾಗಿತ್ತು ಹಾಗೂ ಇದರ ಮುಂದುವರಿದ ಭಾಗವಾಗಿ ಶುಕ್ರವಾರ ವಿಧಾನ ಸೌಧದಲ್ಲಿ ಮರಳು ಮತ್ತುಭೂ ವಿಜ್ಞಾನ ಇಲಾಖೆಯ ಸಚಿವ ಸಿ.ಸಿ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

Advertisement
Advertisement

ಶುಕ್ರವಾರದ ಸಭೆಯಲ್ಲಿ 2010-11ರ ಮರಳು ನೀತಿಯಿಂದ ಕರಾವಳಿ ಭಾಗಕ್ಕೆ ಅನ್ಯಾಯವಾಗಿದೆ ಎಂಬುದನ್ನು ಒತ್ತಿ ಹೇಳಿದ ಜಿಲ್ಲೆಯ ಶಾಸಕರು ,ಮರಳು ನೀತಿಯನ್ನು ಸಡಿಲೀಕರಣ ಮಾಡುವಂತೆ ಮನವಿ ಮಾಡಿದರು.
ನಾನ್ ಸಿ ಆರ್ ಝೆಡ್ ಪ್ರದೇಶದಲ್ಲಿ ಟೆಂಡರ್ ಬದಲಾಗಿ ಟೆಂಪರರಿ ಪರ್ಮಿಟ್ ನೀಡಿ ಪಾರಂಪರಿಕ ಮರಳುಗಾರಿಕೆ ಮಾಡುವವರಿಗೆ ಅವಕಾಶ ಮಾಡಿಕೊಡಬೇಕು. ಈಗಿರುವ ಮರಳು ದಿಬ್ಬವನ್ನು ಕನಿಷ್ಟ 5 ಎಕ್ರೆ ಬೇಕೇಂಬ ನಿಯಮವನ್ನು ಸಡಲೀಕರಿಸಿ 50 ಸೆಂಟ್ಸ್ ಇರುವವರೆಗೂ ಅವಕಾಶ ನೀಡಬೇಕು.ಮಳೆಗಾಲದಲ್ಲಿ ಮಣ್ಣು ಮರಳಾಗುವುದರಿಂದ ನಾನ್ ಸಿಆರ್‍ಝೆಡ್‍ನಲ್ಲಿ ನೀರಿನ ಒಳ ಹಾಗೂ ಹೊರಗಿನ ಮರಳು ತೆಗೆಯಲು ಅವಕಾಶ ನೀಡಬೇಕು ಎಂಬುದನ್ನೂ ಸಚಿವರ ಗಮನಕ್ಕೆ ತರಲಾಯಿತು.ಇದಕ್ಕಾಗಿ ಆಯಾ ಜಿಲ್ಲೆಯ ಜಿಲ್ಲಾ„ಕಾರಿಗಳು 2 ದಿನಗಳೊಳಗೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಸೂಚಿಸಿದರು.

ಪಾರಂಪಾರಿಕ ಮರಳುಗಾರಿಕೆಯ ಬಗ್ಗೆ ರಾಜ್ಯದ ಮರಳು ನೀತಿಯಲ್ಲಿ ಗುಜರಾತ್‍ನ ಮರಳು ನೀತಿಯ ಕುರಿತು ಉಲ್ಲೇಖ ಇರುವುದರಿಂದ ,ಗುಜರಾತ್ ಮರಳು ನೀತಿಯನ್ನು ಕರ್ನಾಟಕದಲ್ಲಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ವಾರದೊಳಗೆ ಗುಜರಾತ್‍ಗೆ ತೆರಳಿ ಅಧ್ಯಯನ ನಡೆಸಿ ಪೂರಕ ಅಂಶಗಳ ವರದಿ ಸಲ್ಲಿಸುವಂತೆಯೂ ಸಚಿವರು ಸೂಚಿಸಿದರು.
ಅದರಂತೆ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಮಹೇಶ್ವರ ರಾವ್,ಕಾರ್ಕಳ ಶಾಸಕ ಸುನೀಲ್ ಕುಮಾರ್.ಉಡುಪಿ ಶಾಸಕ ರಘುಪತಿ ಭಟ್,ಪುತ್ತೂರು ಶಾಸಕ ಸಂಜೀವ ಮಠಂದೂರು,ಕುಮಟಾ ಶಾಸಕ ದಿನಕರ ಶೆಟ್ಟಿ ಅವರನ್ನೊಳಗೊಂಡ ತಂಡವನ್ನು ಅಧ್ಯಯನಕ್ಕಾಗಿ ರಚಿಸಲಾಗಿದೆ.ವಾರದೊಳಗೆ ಗುಜರಾತ್‍ನ ಮರಳು ನೀತಿಯ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಸಚಿವ ಸಿ.ಸಿ.ಪಾಟೀಲ್ ಸೂಚಿಸಿದರು.

ಮರಳು ಸಮಸ್ಯೆ ಕುರಿತು ಜಿಲ್ಲೆಯ ನಿಯೋಗ ಗುರುವಾರ ಬೆಂಗಳೂರಿಗೆ ತೆರಳಿ ಕರಾವಳಿಯ ಶಾಸಕರಿಗೆ ಪೂರಕ ಮಾಹಿತಿ ಹಾಗೂ ಸಮಸ್ಯೆಗಳ ಕುರಿತು ವಿವರಣೆ ನೀಡಿದರು.
ನಿಯೋಗದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು,ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಜಿ.ಪಂ.ಮಾಜಿ ಸದಸ್ಯ ನವೀನ್ ಕುಮಾರ್ ಮೇನಾಲ,ಸವಣೂರು ಗ್ರಾ.ಪಂ.ಸದಸ್ಯ ಪ್ರಕಾಶ್ ಕುದ್ಮನಮಜಲು, ಸುರೇಶ್ ಕುಂಡಡ್ಕ ಪೆರಾಬೆ,ತೀರ್ಥರಾಮ ಕೆಡೆಂಜಿ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ,ಜಿನ್ಸಿ ನೆಲ್ಯಾಡಿ,ಪೇಸ್‍ನ ಮಾಜಿ ಅಧ್ಯಕ್ಷ ವಸಂತ ಭಟ್ ಪುತ್ತೂರು,ರಾಘವೇಂದ್ರ ಭಟ್ ಕೆದಿಲ ಮೊದಲಾವರಿದ್ದರು.

ಕರಾವಳಿ ಭಾಗದ ಮರಳು ಸಮಸ್ಯೆ ಕುರಿತಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕರಾದ ಸಂಜೀವ ಮಠಂದೂರು,ಎಸ್ ಅಂಗಾರ,ಉಮಾನಾಥ ಕೋಟ್ಯಾನ್,ಡಾ.ಭರತ್ ಶೆಟ್ಟಿ,ವೇದವ್ಯಾಸ ಕಾಮತ್,ರಾಜೇಶ್ ನಾೈಕ್,ಸುಕುಮಾರ ಶೆಟ್ಟಿ,ಹಾಲಾಡಿ ಶ್ರೀನಿವಾಸ ಶೆಟ್ಟಿ,ಲಾಲಾಜಿ ಮೆಂಡನ್, ಹರೀಶ್ ಪೂಂಜಾ ,ದಿನಕರ ಶೆಟ್ಟಿ ಸಚಿವರ ಮುಂದಿಟ್ಟರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group