ದ ಕ ಜಿಲ್ಲೆಯಲ್ಲಿ ಬುಧವಾರ ಕೊರೊನಾ ಕಂಟಕ | ಕೊರೊನಾ ವೈರಸ್ ಒಂದು ಪಾಸಿಟಿವ್ | ಕೊರೊನಾಕ್ಕೆ ಒಂದು ಬಲಿ

May 13, 2020
3:06 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ ಇನ್ನೊಂದು ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರಿನ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಉಳ್ಳಾಲದ ಸೋಮೇಶ್ವರದ  ದಾರಂದಬಾಗಿಲು ಪ್ರದೇಶದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು  ಖಚಿತವಾಗಿದೆ. ಮಹಿಳೆಗೆ ಫಸ್ಟ್‌ನ್ಯೂರೋ ಸಂಪರ್ಕದಿಂದ ಸೋಂಕು ಹರಡಿರುವುದು  ದೃಢಪಟ್ಟಿದೆ.

ರಾಜ್ಯದಲ್ಲಿ  ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 951 ತಲುಪಿದ್ದು, 32 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 442 ಮಂದಿ ಗುಣಮುಖರಾಗಿದ್ದಾರೆ.

ಈ ನಡುವೆ ಕೊರೊನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ಮಹಿಳೆಗೆ ಎ.30 ರಂದು ಕೊರೊನಾ ದೃಢಪಟ್ಟಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.

ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ವಿಶ್ವದ 180ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ನಿಂದ ಸಾವಿನ ಸಂಖ್ಯೆ  290,269ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ವೈರಸ್ ಗೆ ಜಗತ್ತಿನಾದ್ಯಂತ 4,531 ಮಂದಿ ಸೋಂಕಿತರು ಬಲಿಯಾಗಿದ್ದು, ಆ ಮೂಲಕ ಜಗತ್ತಿನಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 290,269ಕ್ಕೆ ಏರಿಕೆಯಾಗಿದೆ. 180 ಕ್ಕೂ ಅಧಿಕ ದೇಶಗಳಲ್ಲಿ ಪಸರಿಸಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 4,238,703ಕ್ಕೆ ಏರಿಕೆಯಾಗಿದೆ. ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪೈಕಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಬಳಿಕ  ರಷ್ಯಾ ಇದ್ದು,  ಸ್ಪೇನ್ ನಲ್ಲಿ ಅಧಿಕ ಸಂಖ್ಯೆಯಲ್ಲಿ  ಕೊರೊನಾ ಪಾಸಿಟಿವ್ ಇದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈ ವರೆಗೂ 24,453 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror