ದ ಕ ಜಿಲ್ಲೆಯಲ್ಲಿ ಶನಿವಾರ 1 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ 26 ಮಂದಿಗೆ ಪಾಸಿಟಿವ್ | ಕಾಸರಗೋಡು ನೆಮ್ಮದಿ |

April 25, 2020
9:52 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶನಿವಾರ ಬಂದ 90 ಪರೀಕ್ಷಾ ವರದಿಗಳಲ್ಲಿ  1 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ.  ಉಡುಪಿ ಜಿಲ್ಲೆ ಕೊರೊನಾ ವೈರಸ್ ಮುಕ್ತವಾಗಿ ಹಸಿರು ವಲಯವಾಗುತ್ತಿದೆ. ರಾಜ್ಯದಲ್ಲಿ  ಶನಿವಾರ ಒಂದೇ ದಿನ 26 ಮಂದಿಗೆ  ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 500 ಕ್ಕೆ ಏರಿಕೆಯಾಗಿದೆ. ಕಾಸರಗೋಡಿನಲ್ಲಿ  ಶನಿವಾರ ನೆಮ್ಮದಿಯ ದಿನವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶನಿವಾರ 211 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಹೀಗಾಗಿ ಒಟ್ಟು 584 ಮಂದಿಯ ಪರೀಕ್ಷಾ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶನಿವಾರ  16 ಮಂದಿಗೆ ಉಸಿರಾಟದ ಸಮಸ್ಯೆ ಇರುವ ಪ್ರಕರಣ ಕಂಡುಬಂದಿದೆ. ಜಿಲ್ಲೆಯ ಜ್ವರ ಕ್ಲಿನಿಕ್ ನಲ್ಲಿ 1406 ಮಂದಿ ಚಿಕಿತ್ಸೆ ಪಡೆದಿದ್ದು 42 ಮಂದಿ ನಿಗಾದಲ್ಲಿದ್ದಾರೆ.

ರಾಜ್ಯದಲ್ಲಿ ಶನಿವಾರ ಒಂದೇ ದಿನ 6 ಮಂದಿಗೆ  ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.  ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ.  ಬೆಂಗಳೂರಿನಲ್ಲಿಯೇ 13 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.  ಬೆಳಗಾವಿಯಲ್ಲಿ 9, ಮಂಡ್ಯದಲ್ಲಿ 1, ಮೈಸೂರಿನಲ್ಲಿ 1 ದಕ್ಷಿಣ ಕನ್ನಡ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯ ಕ್ಯಾಮಾರಮ್ಯಾನ್ ಗೂ ಕೊರೊನಾ ಪಾಸಿಟಿವ್ ಕಂಡುಬಂದಿದ್ದುಅವರೊಂದಿಗೆ ಸಂಪರ್ಕ ಹೊಂದಿರುವ 30ಕ್ಕೂ ಹೆಚ್ಚು ಪತ್ರಕರ್ತರಿಗೆ ಹೋಂ ಕ್ವಾರಂಟೈನ್ ನಲ್ಲಿರುವಂತೆ ಆರೋಗ್ಯ ಇಲಾಖೆ ಆದೇಶ ನೀಡಿದೆ.

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರ ಗಡಿಯತ್ತ ಸಾಗಿದ್ದು, ಒಂದೇ ದಿನ 1,490 ಹೊಸ ಪಾಸಿಟಿವ್ ಪ್ರಕರಣ ದಾಖಲಾಗುವುದರೊಂದಿಗೆ ಶನಿವಾರ ದೇಶದಲ್ಲಿ ಸೋಂಕಿತರ ಸಂಖ್ಯೆ 24,942ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 56 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 779ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ  ಮಾಹಿತಿ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror