ದಶಮನೋತ್ಸವ ಹತ್ತರ ಹುತ್ತರಿ ಕಾರ್ಯಕ್ರಮ: ವಿವಿಧ ಕ್ಷೇತ್ರದ ಎಂಟು ಸಾಧಕರಿಗೆ ಸಮ್ಮಾನ

September 4, 2019
1:00 PM

ಬೆಳ್ಳಾರೆ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಂಡಡ್ಕ-ಮುಕ್ಕೂರು ಇದರ ದಶಮಾನೋತ್ಸವದ ಪ್ರಯುಕ್ತ ನಡೆದ ಹತ್ತರ ಹುತ್ತರಿ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಎಂಟು ಮಂದಿಯನ್ನು ಸನ್ಮಾನಿಸಲಾಯಿತು.

Advertisement
Advertisement

ಡಾ|ನರಸಿಂಹ ಶರ್ಮಾ ಕಾನಾವು (ವೈದ್ಯ) ಭೂ ವಿಜ್ಞಾನಿ ಸಂದ್ಯಾ ಕುಮಾರಿ (ಭೂ ವಿಜ್ಞಾನಿ), ಜಗನ್ನಾಥ ಪೂಜಾರಿ ಮುಕ್ಕೂರು ಇಸ್ಮಾಯಿಲ್ ಕುಂಡಡ್ಕ ( ಪ್ರಗತಿಪರ ಕೃಷಿಕ), ಅಶ್ವಿನಿ ಕೋಡಿಬೈಲು (ಸಾಹಿತ್ಯ),ಯಶೋಧಾ ಬೀರುಸಾಗು (ನಾಟಿ ವೈದ್ಯ), ಕೊರಗ್ಗು ಅನೋವುಗುಂಡಿ(ದೈವ ಪರಿಚಾರಕ), ಕಂಜೋಲಿ (ಹಿರಿಯ ನಾಗರಿಕ) ಅವರನ್ನು ತಹಶೀಲ್ದಾರ್ ಕುಂಞ ಅಹ್ಮದ್ ಅವರು ಸಮ್ಮಾನಿಸಿದರು. ಶಿಕ್ಷಕ ಲಿಂಗಪ್ಪ ಬೆಳ್ಳಾರೆ ಅಭಿನಂದನಾ ಮಾತುಗಳನ್ನಾಡಿದರು.

ದಶಮಾನೋತ್ಸವ ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪ್ರಾದ್ಯಾಪಕ ಡಾ|ನರೇಂದ್ರ ರೈ ದೇರ್ಲ, ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಬೆಳ್ಳಾರೆ ಠಾಣಾ ಸಬ್ ಇನ್ಸ್‍ಪೆಕ್ಟರ್ ಈರಯ್ಯ ಡಿ.ಎನ್., ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ|ಪೊಡಿಯಾ, ಡಿಸಿಸಿ ಬ್ಯಾಂಕ್ ಮಾರಾಟಾಧಿಕಾರಿ ಸಂತೋಷ್ ಕುಮಾರ್ ಮರಕ್ಕಡ, ಪೆರುವಾಜೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಲಲಿತಾ, ಮುಕ್ಕೂರು ಶಾಲಾ ಮುಖ್ಯಗುರು ವಸಂತಿ, ದಶಮಾನೋತ್ಸವ ಸಮಿತಿ ಗೌರವಾಧ್ಯಕ್ಷ ತಿರುಮಲೇಶ್ವರ ಭಟ್ ಕಾನಾವು, ಕಾರ್ಯಾಧ್ಯಕ್ಷ ಉಮೇಶ್ ಕೆ.ಎಂಬಿ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಎನ್.ಕೆ, ಕೋಶಾದಿಕಾರಿ ರಮೇಶ್ ಕಾನಾವು ಉಪಸ್ಥಿತರಿದ್ದರು.

ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಉಮೇಶ್ ಕೆ.ಎಂ.ಬಿ ವಂದಿಸಿದರು. ರಕ್ಷಿತ್ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?
June 21, 2025
8:17 AM
by: ದ ರೂರಲ್ ಮಿರರ್.ಕಾಂ
ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?
June 21, 2025
7:24 AM
by: ದ ರೂರಲ್ ಮಿರರ್.ಕಾಂ
ಸಸ್ಯ ಪರಿಚಯ | ಕರ್ಲೆಂಕಿ
June 20, 2025
11:18 PM
by: ಜಯಲಕ್ಷ್ಮಿ ದಾಮ್ಲೆ
ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?
June 20, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group