ದೇಲಂಪಾಡಿಯಲ್ಲಿ ತಾಳಮದ್ದಳೆ

July 18, 2019
4:00 PM

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ವಿಷ್ಣುಶರಣ ಬನಾರಿ ಅವರ ವತಿಯಿಂದ ವಿಶೇಷ ಯಕ್ಷಗಾನ ತಾಳಮದ್ದಳೆ ಕಲಾಸೇವೆಯು ಶ್ರೀ ಗೋಪಾಲಕೃಷ್ಣ ದೇವರ ಪೂಜೆಯೊಂದಿಗೆ ನೆರವೇರಿತು.

Advertisement
Advertisement

ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಹಿರಿತನದಲ್ಲಿ ಜರಗಿದ “ದಾನಶೂರ ಕರ್ಣ” ಯಕ್ಷಗಾನ ತಾಳಮದ್ದಳೆಯ ಕಾರ್ಯಕ್ರಮದಲ್ಲಿ ಸರೋಜಿನಿ ಬನಾರಿ ಅವರು ಸ್ವಾಗತಿಸಿದರು. ಭಾಗವತರಾಗಿ ವಿಶ್ವವಿನೋದ ಬನಾರಿ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದನದಲ್ಲಿ ಕಲ್ಲಡ್ಕ ಶಿವರಾಮ ಕಲ್ಲೂರಾಯ, ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ನಾರಾಯಣ ಪಾಟಾಳಿ ಮಯ್ಯಾಳ, ಸದಾನಂದ ಮಯ್ಯಾಳ, ವಿಷ್ಣುಶರಣ ಬನಾರಿ ಭಾಗವಹಿಸಿದರು. ರಾಮನಾಯ್ಕ ದೇಲಂಪಾಡಿ ಅವರು ಚಕ್ರತಾಳ ನುಡಿಸಿದರು.
ಅರ್ಥಧಾರಿಗಳಾಗಿ ಕೀರಿಕ್ಕಾಡು ಗಣೇಶ ಶರ್ಮ ಸಿದ್ಧಕಟ್ಟೆ (ಕರ್ಣ), ನಾರಾಯಣ ದೇಲಂಪಾಡಿ (ಅರ್ಜುನ 1ನೇ ಭಾಗ), ಎ.ಜಿ ಮುದಿಯಾರು (ಅರ್ಜುನ 2ನೇ ಭಾಗ), ಕಲ್ಲಡ್ಕ ಗುತ್ತು ರಾಮಯ್ಯ ರೈ (ಶ್ರೀಕೃಷ್ಣ 1ನೇ ಭಾಗ), ರಾಮಣ್ಣ ಮಾಸ್ತರ್ ದೇಲಂಪಾಡಿ (ಶ್ರೀಕೃಷ್ಣ 2ನೇ ಭಾಗ), ಯಂ ರಮಾನಂದ ರೈ ದೇಲಂಪಾಡಿ (ಶಲ್ಯ), ವಿಕೇಶ್ ರೈ ಶೇಣಿ (ಅಶ್ವಸೇನ), ಬಿ.ಯಚ್.ವೆಂಕಪ್ಪ ಗೌಡ (ವೃದ್ಧ ಬ್ರಾಹ್ಮಣ) ಪಾತ್ರಧಾರಿಗಳಾಗಿ ಜನಮನವನ್ನು ರಂಜಿಸಿದರು.

ದಿವ್ಯಾನಂದ ಪೆಂರ್ದಲಪದವು ಅವರು ವಂದನಾರ್ಪಣೆ ಸಲ್ಲಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ
ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು
July 7, 2025
8:22 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror