ದೇಶದಲ್ಲಿ ಕೊರೊನಾ ಹೆಚ್ಚುತ್ತಲೇ ಇದೆ | ಲಾಕ್ಡೌನ್ ನಿಯಮ ಪಾಲಿಸಿ | ಕೇಂದ್ರ ಸರಕಾರದಿಂದ ಸೂಚನೆ

April 20, 2020
11:21 AM

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮ ಪಾಲಿಸಿ ಎಂದು ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ.  ಈ ನಡುವೆ ಭಾರತದಲ್ಲಿ ಕೊರೊನಾ ಹಾಟ್­ಸ್ಪಾಟ್­ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ , ಕೊರೊನಾ ನೆಗೆಟಿವ್ ಪ್ರಕರಣಗಳು ಇರುವ ಕಡೆ ಕೊಂಚ  ಬದಲಾವಣೆ ತಂದಿದೆ. ಉಳಿದ ಕಡೆಗಳಲ್ಲಿ  ಕಟ್ಟುನಿಟ್ಟಿನ ನಿಯಮ ಜಾರಿ ಇರಲಿ ಎಂದೂ ಹೇಳಿದೆ.

ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದೆ. ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ.ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ.

Advertisement

ಮತ್ತೊಂದೆಡೆ ಕೇರಳ ಸರಕಾರ ಲಾಕ್ಡೌನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್’ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror