ಧರ್ಮಸ್ಥಳ ಮತ್ತು ಉಜಿರೆಯಲ್ಲಿ ಸಾಂಸ್ಕೃತಿಕ ಪರ್ವ: ಮಾ.10ರಿಂದ ಭಾರತೀಯ ಲೋಕ ಉತ್ಸವ, ಧರ್ಮಸ್ಥಳ – 2020

March 8, 2020
4:20 PM

ಧರ್ಮಸ್ಥಳ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ತಂಜಾವೂರಿನ ದಕ್ಷಿಣ ವಲಯ ಕೇಂದ್ರದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸಹಯೋಗದೊಂದಿಗೆ ಮಾ.10 ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಹಾಗೂ 11 ಮತ್ತು 12 ರಂದು (ಬುಧವಾರ ಮತ್ತು ಗುರುವಾರ) ಉಜಿರೆಯಲ್ಲಿ “ವನರಂಗ” ಬಯಲು ರಂಗಮಂದಿರದಲ್ಲಿ “ಭಾರತೀಯ ಲೋಕ ಉತ್ಸವ, ಧರ್ಮಸ್ಥಳ – 2020” ಆಯೋಜಿಸಲಾಗಿದೆ.

ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೊರಾಂ, ನಾಗಾಲ್ಯಾಂಡ್, ಸಿಕ್ಕಿಂ, ಕರ್ನಾಟಕ, ತ್ರಿಪುರಾ ಮೊದಲಾದ ರಾಜ್ಯಗಳಿಂದ ನೂರಾರು ಮಂದಿ ಜಾನಪದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.ಮಂಗಳವಾರ ಸಂಜೆ 6 ಗಂಟೆಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಸಮಾರಂಭವನ್ನು ಉದ್ಘಾಟಿಸುವರು.

ಪ್ರತಿ ದಿನ ಸಂಜೆ ಆರು ಗಂಟೆಯಿಂದ ಎಂಟು ಗಂಟೆವರೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರವನ್ನು ವೀಕ್ಷಿಸಲು ಕಲಾಭಿಮಾನಿಗಳಿಗೆ ಮುಕ್ತ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror