ಧರ್ಮಸ್ಥಳ : ಸಂಚಾರಿ ಆಸ್ಪತ್ರೆ ಧಾರವಾಡ ಎಸ್.ಡಿ.ಎಂ. ವಿಶ್ವವಿದ್ಯಾಲಯಕ್ಕೆ ಹಸ್ತಾಂತರ

December 29, 2019
7:17 PM

ಉಜಿರೆ: ಕಳೆದ 45 ವರ್ಷಗಳಲ್ಲಿ ಉತ್ತರಕನ್ನಡ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರ ಮನೆ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ನೀಡಿದ ಧರ್ಮಸ್ಥಳದ ಎಸ್.ಡಿ.ಎಂ.ಸಂಚಾರಿ ಆಸ್ಪತ್ರೆಯನ್ನು ಭಾನುವಾರ ದೇವಸ್ಥಾನದ ಎದುರುಗಡೆ ನಡೆದ ಸರಳ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧಾರವಾಡದ ಎಸ್.ಡಿ.ಎಂ. ವಿಶ್ವವಿದ್ಯಾಲಯದ ನಿರ್ದೇಶಕ (ಆಡಳಿತ) ಸಾಕೇತ್ ಶೆಟ್ಟಿ ಅವರಿಗೆ “ಕೀ”ಯನ್ನು ನೀಡುವ ಮೂಲಕ ಆಸ್ಪತ್ರೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು.

ಸದ್ಯ ಉಭಯ ಜಿಲ್ಲೆಗಳಲ್ಲಿ ಹಲವಾರು ಆಸ್ಪತ್ರೆಗಳಿದ್ದು ಆರೋಗ್ಯ ಸೇವೆ ಲಭ್ಯ ಇರುವುದರಿಂದ ಸಂಚಾರಿ ಆಸ್ಪತ್ರೆಯನ್ನು ಧಾರವಾಡಕ್ಕೆ ಹಸ್ತಾಂತರಿಸಿದ್ದು, ಅಲ್ಲಿ ಸಮುದಾಯ ಆರೋಗ್ಯ ಸೇವೆ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಆರೋಗ್ಯ ಸೇವೆ ನೀಡಲಾಗುವುದು ಎಂದು ಹೆಗ್ಗಡೆಯವರು ತಿಳಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಸುಪ್ರಿಯಾ ಹರ್ಷೇಂದ್ರಕುಮಾರ್, ಶ್ರದ್ಧಾ ಅಮಿತ್, ಕುಮಾರಿ ಮಾನ್ಯ, ನಿಶ್ಚಲ್‍ಕುಮಾರ್, ಡಾ. ಮೃಣಾಲಿನಿ, ಸಂಚಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾರಾಯಣ ಪ್ರಭು ಮತ್ತು ಸಿಬ್ಬಂದಿ, ಎಸ್.ಡಿ.ಎಮ್. ಮೆಡಿಕಲ್‍ ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ, ಮಾಜಿ ಕಾರ್ಯದರ್ಶಿಗಳಾದ ಅನಂತಪದ್ಮನಾಭ ಭಟ್ ಮತ್ತು ಎ.ವಿ. ಶೆಟ್ಟಿ, ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣರಾವ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror