ಧರ್ಮಸ್ಥಳದಲ್ಲಿ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ಬಹುಮಾನ ವಿತರಣೆ

May 6, 2019
7:30 AM

ಧರ್ಮಸ್ಥಳ :ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಆಯೋಜಿಸಲಾದ 17 ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಿಸಿ ಮಾತನಾಡಿದ ಚಿತ್ರಕಲಾವಿದ ಮುಖ್ಯಮಂತ್ರಿಚಂದ್ರು, ಕಲೆಗೆ ಜಾತಿ-ಮತ, ಬಡವ-ಬಲ್ಲಿದನೆಂಬ ಬೇಧವಿಲ್ಲ. ಕಲೆಯಿಂದ ಮನಸ್ಸಿಗೆ ಸಂತಾಸದಾಯಕವಾಗುವುದರ ಜೊತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ. ಸರ್ವರಿಗೂ ಸಮಪಾಲು, ಸಮಬಾಳು ತತ್ವದ ನೆಲೆಯಲ್ಲಿ ಧರ್ಮಸ್ಥಳದಲ್ಲಿ ಹೆಗ್ಗಡೆಯವರು ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದರು.

ಶುಭಾಶಂಸನೆ ಮಾಡಿದ ಗಂಜಿಫಾ ರಘುಪತಿ ಭಟ್, ಧರ್ಮಸ್ಥಳವು ನಮ್ಮಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಪಾವನ ಕ್ಷೇತ್ರವಾಗಿದೆಎಂದು ಹೇಳಿದರು.ವಿದೇಶೀ ಶೈಲಿಯ ಕಲೆಗಳ ವ್ಯಾಮೋಹದಿಂದ ದೇಶೀಯ ಚಿತ್ರಕಲೆ ವಿನಾಶದಂಚಿನಲ್ಲಿದೆಎಂದುಅವರು ವಿಷಾದ ವ್ಯಕ್ತಪಡಿಸಿದರು.


ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಕಲೆಗೆ ಅದ್ಭುತ ಶಕ್ತಿ ಇದ್ದುಕಲೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಹಾಗೂ ತೃಪ್ತಿ ಸಿಗುತ್ತದೆ.ಸೃಜನಾತ್ಮಕ ಕಲೆ ಹಾಗೂ ವಾಸ್ತವಿಕ ಕಲೆಯಿಂದ ನಮ್ಮಲ್ಲಿ ಸಜ್ಜನಿಕೆ ಮತ್ತುಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದರು.

ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರಕುಮಾರ್ ಶಾಂತಿವನಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದರು.

ಯೋಗ ನಿರ್ದೇಶಕ ಶಶಿಕಾಂತ್ ಜೈನ್ ಸ್ವಾಗತಿಸಿದರು.ಮೂಡಬಿದ್ರೆ ಪ್ರಾಂತ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ ಬಾಲಕೃಷ್ಣ ಧನ್ಯವಾದವಿತ್ತರು.ಬಂಟ್ವಾಳದ ಸದಾಶಿವ ನಾಯಕ್‍ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror