ಧರ್ಮಸ್ಥಳದಲ್ಲಿ ಸಮವಸರಣ ಪೂಜೆ

November 28, 2019
6:50 PM

ಉಜಿರೆ: ಧರ್ಮಸ್ಥಳದಲ್ಲಿ ಬುಧವಾರ ರಾತ್ರಿ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು.

ಹೆಗ್ಗಡೆಯವರ ನಿವಾಸದಿಂದ (ಬೀಡಿನಿಂದ) ಸಂಜೆ ಏಳು ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ಮಹೋತ್ಸವ ಸಭಾ ಭವನಕ್ಕೆ ಹೋದ ಬಳಿಕ ಅಲ್ಲಿ ಪಂಚ ನಮಸ್ಕಾರ ಮಂತ್ರ ಪಠಣ, ಸಮವಸರಣ ಪೂಜಾ ಮಂತ್ರ ಪಠಣ ಆದ ಮೇಲೆ ಶ್ರಾವಕ-ಶ್ರಾವಿಕೆಯರಿಂದ ಅಷ್ಟವಿಧಾರ್ಚನೆ ಪೂಜೆ ನಡೆಯಿತು. ಗಣಧರ ಪರಮೇಷ್ಠಿ ಪೂಜೆ, ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಪೂಜೆ ಮತ್ತು ಶ್ರುತ ಪೂಜೆ ನಡೆಯಿತು.

ಸೌಮ್ಯ, ಸಾವಿತ್ರಿ, ಮಂಜುಳಾ ಮತ್ತು ಅಭಿಜ್ಞಾ ಹಾಗೂ ಬಳಗದವರು ಪೂಜಾ ಮಂತ್ರ ಪಠಣ ಮಾಡಿದರು. ಕ್ಷುಲ್ಲಕ 105 ಶ್ರೀ ನಿರ್ಮಲ ಸಾಗರ್ಜಿ ಉಪಸ್ಥಿತರಿದ್ದರು.
ಶಿಶಿರ್ ಇಂದ್ರರ ನೇತೃತ್ವದಲ್ಲಿ ನಡೆದ ಅಷ್ಟವಿಧಾರ್ಚನೆ ಸಂಗೀತ ಪೂಜಾ ಮಂತ್ರ ಪಠಣದಲ್ಲಿ ಮಲ್ಲಿನಾಥ್‍ಜೈನ್, ಸೌಮ್ಯಎಸ್. ರಾಜ್, ಅಭಿಜ್ಞಾ ಬಳ್ಳಾಲ್, ಮಂಜುಳಾ, ಎಂ.ಸಾವಿತ್ರಿ ಪುಷ್ಪದಂತ ಹಾಗೂ ಹಿಮ್ಮೇಳದಲ್ಲಿ ಭಗೀರಥ ಮತ್ತು ಶೋಧನ್ ಸಹಕರಿಸಿದರು.

 

 

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಉಪಸ್ಥಿತರಿದ್ದರು. ಪಾಕ ಪರಿಣತರಾದ ಕನ್ನಡಿಕಟ್ಟೆಯ ರತ್ನರಾಜ ಮತ್ತು ಇರ್ವತ್ತೂರು ಜಯಕೀರ್ತಿ ಜೈನ್‍ ಅವರನ್ನು ಸನ್ಮಾನಿಸಲಾಯಿತು.

ಮಹಾ ಮಂಗಳಾರತಿ ನಂತರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ತರಲಾಯಿತು. ಶ್ರೀ ಬಾಹುಬಲಿ ಸೇವಾ ಸಮಿತಿಯ ಸದಸ್ಯರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror