ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಕಲಾವಿದ ಅರವಿಂದ ಬೋಳಾರ್ ಅವರು ಪುರೋಹಿತರು-ಜ್ಯೋತಿಷಿಗಳನ್ನು ಅವಮಾನಿಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕುಂಜತ್ ಬೈಲ್ ನಿವಾಸಿ ಶಿವರಾಜ್ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ ಕಲಾವಿದ ಅರವಿಂದ ಬೋಳಾರ್ ಅವರು ವಿಎಚ್ಪಿ ಕಚೇರಿಗೆ ತೆರಳಿ ಕ್ಷಮೆಯಾಚಿಸಿದ್ದಾರೆ. ತನ್ನ ಮಾತಿನಲ್ಲಿ ಪ್ರಮಾದವಾಗಿದೆ. ಮುಂದೆ ಈ ರೀತಿಯ ಯಾವುದೇ ದೃಶ್ಯಗಳನ್ನು ನಾನು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಪುರೋಹಿತರುಹಾಗೂ ಜ್ಯೋತಿಷಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಸಂದರ್ಭ ವಿಎಚ್ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ರಂಗಭೂಮಿ ಕಲಾವಿದ ಸದಾಶಿವ, ವಿಎಚ್ಪಿ ಜಿಲ್ಲಾ ಅಧ್ಯಕ್ಷ ಗೋಪಾಲ ಕುತ್ತಾರು ಮೊದಲಾದವರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel